More

    ಜಾನಪದ ವಿವಿ ಶೈಕ್ಷಣಿಕ ಅಭಿವೃದ್ಧಿಗೆ ಶ್ರಮ

    ಶಿಗ್ಗಾಂವಿ: ಜಾನಪದ ವಿಶ್ವವಿದ್ಯಾಲಯದ ಶೈಕ್ಷಣಿಕ ಮತ್ತು ಬೌದ್ಧಿಕ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ಜಾನಪದ ವಿಶ್ವವಿದ್ಯಾಲಯದ ನೂತನ ಕುಲಸಚಿವ (ಮೌಲ್ಯಮಾಪನ) ಪ್ರೊ.ನಾರಾಯಣ ಸಾಲಿ ಹೇಳಿದರು.

    ತಾಲೂಕಿನ ಗೋಟಗೋಡಿಯ ಜಾನಪದ ವಿವಿ ಆಡಳಿತ ಭವನದ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಸಮಾರಂಭದಲ್ಲಿ ಮಾತನಾಡಿದ ಅವರು, ವಿಶೇಷವಾಗಿರುವ ಜಾನಪದ ವಿಶ್ವವಿದ್ಯಾಲಯದಲ್ಲಿ ಕರ್ತವ್ಯ ನಿರ್ವಹಿಸಲು ಉತ್ಸುಕನಾಗಿದ್ದೇನೆ. ಸರ್ಕಾರ ನೀಡಿರುವ ಈ ಅವಕಾಶವನ್ನು ಸದುಪಯೋಗ ಮಾಡಲಾಗುವುದು ಎಂದರು.

    ಅಧ್ಯಕ್ಷತೆ ವಹಿಸಿದ್ದ ಕುಲಪತಿ ಪ್ರೊ. ಡಿ.ಬಿ. ನಾಯಕ ಮಾತನಾಡಿ, ಸಾಂಪ್ರದಾಯಿಕ ವಿಶ್ವವಿದ್ಯಾಲಯಗಳಲ್ಲಿ ಇರುವುದಕ್ಕಿಂತ ಭಿನ್ನವಾದ ಸವಾಲುಗಳು ಜಾನಪದ ವಿಶ್ವವಿದ್ಯಾಲಯದಲ್ಲಿದೆ. ಅವುಗಳನ್ನು ಪ್ರೊ. ನಾರಾಯಣ ಸಾಲಿ ಸಮರ್ಪಕವಾಗಿ ನಿರ್ವಹಿಸುತ್ತಾರೆ ಎಂಬ ಭರವಸೆ ಇದೆ ಎಂದರು.

    ಧಾರವಾಡದ ಕವಿವಿ ಪ್ರಭಾರ ಕುಲಪತಿ ಪ್ರೊ. ಟಿ.ಎಂ. ಭಾಸ್ಕರ, ಕವಿವಿ ಕುಲಸಚಿವ (ಮೌಲ್ಯಮಾಪನ) ಪ್ರೊ. ರವೀಂದ್ರನಾಥ ಎನ್. ಕದಂ, ಪ್ರೊ. ಚಂದ್ರಶೇಖರ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts