More

    ಜಿಲ್ಲಾಸ್ಪತ್ರೆಯಲ್ಲಿ ಕೇಂದ್ರೀಕೃತ ಆಕ್ಸಿಜನ್ ವ್ಯವಸ್ಥೆ

    ಧಾರವಾಡ: ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ನೂತನವಾಗಿ ಸ್ಥಾಪಿಸಿರುವ 6 ಸಾವಿರ ಲೀ. ಸಾಮರ್ಥ್ಯದ ಕೇಂದ್ರೀಕೃತ ಆಕ್ಸಿಜನ್ ಪೂರೈಕೆ ಘಟಕವನ್ನು ಜಿಲ್ಲಾಧಿಕಾರಿ ನಿತೇಶ ಪಾಟೀಲ ಬುಧವಾರ ಉದ್ಘಾಟಿಸಿದರು.

    ನಂತರ ಮಾತನಾಡಿದ ಅವರು, ಜಿಲ್ಲಾಸ್ಪತ್ರೆಯಲ್ಲಿ ಈವರೆಗೆ ನಿತ್ಯ 80 ರಿಂದ 100 ಜಂಬೋ ಆಕ್ಸಿಜನ್ ಸಿಲಿಂಡರ್​ಗಳನ್ನು ವೈದ್ಯಕೀಯ ಚಿಕಿತ್ಸೆಗೆ ಬಳಸಲಾಗುತ್ತಿತ್ತು. ಈಗ 6 ಸಾವಿರ ಲೀ. ಸಾಮರ್ಥ್ಯದ ಕೇಂದ್ರೀಕೃತ ಆಕ್ಸಿಜನ್ ಪೂರೈಕೆ ಘಟಕ ಸ್ಥಾಪನೆಯಿಂದ ಸಮಯ, ಸಾರಿಗೆ ವೆಚ್ಚ ಉಳಿಯಲಿದೆ. ಸುರಕ್ಷತೆ ಮತ್ತು ಲಭ್ಯತೆ ದೃಷ್ಟಿಯಿಂದಲೂ ಅನುಕೂಲ. ಜಿಲ್ಲೆಯ ಜನತೆಗೆ, ಜಿಲ್ಲಾ ಆಸ್ಪತ್ರೆಗೆ ಶಾಶ್ವತ ಆಸ್ತಿಯಾಗಲಿದೆ. ಈ ಘಟಕ ಸ್ಥಾಪನೆ ಪ್ರಕ್ರಿಯೆಗೆ ಸರ್ಕಾರದ ಮಟ್ಟದಲ್ಲಿ ತ್ವರಿತ ಆರ್ಥಿಕ ಮತ್ತು ತಾಂತ್ರಿಕ ಅನುಮೋದನೆ ದೊರೆತು ಸಾಕಷ್ಟು ಸಹಕಾರ ಸಿಕ್ಕಿದೆ ಎಂದರು.

    ಜಿಲ್ಲೆಯಲ್ಲಿ ಕೋವಿಡ್ ಚಿಕಿತ್ಸೆಗೆ ಕಿಮ್್ಸ ಸಂಸ್ಥೆ ದೊಡ್ಡ ಕೊಡುಗೆ ನೀಡಿದೆ. ಜಿಲ್ಲಾಸ್ಪತ್ರೆಯೂ ಉತ್ತಮ ಚಿಕಿತ್ಸೆ ನೀಡುತ್ತಿದ್ದು, ಈವರೆಗೆ 540 ರೋಗಿಗಳು ಗುಣವಾಗಿ ಬಿಡುಗಡೆಯಾಗಿದ್ದಾರೆ. ಸಿಬ್ಬಂದಿ, ಮಾನವ ಸಂಪನ್ಮೂಲ, ತಜ್ಞ ವೈದ್ಯರ ಕೊರತೆ ನಡುವೆಯೂ ಜಿಲ್ಲಾ ಶಸ್ತ್ರ ಚಿಕಿತ್ಸಕರು ಹಾಗೂ ವೈದ್ಯಾಧಿಕಾರಿಗಳು ಅಹರ್ನಿಶಿ ದುಡಿಯುತ್ತಿರುವುದು ಮಾದರಿಯಾಗಿದೆ ಎಂದರು.

    ಕರೊನಾ ಸೋಂಕಿತರ ಚಿಕಿತ್ಸೆಯೊಂದಿಗೆ ಒಪಿಡಿ, ಹೆರಿಗೆ ವಿಭಾಗಗಳು ಜಿಲ್ಲಾ ಆಸ್ಪತ್ರೆಯಲ್ಲಿ ನಿರಂತರ ಕಾರ್ಯ ನಿರ್ವಹಿಸುತ್ತಿರುವುದರಿಂದ ಜನರಿಗೆ ಅನುಕೂಲವಾಗಿದೆ. ಮುಂದಿನ ದಿನಗಳಲ್ಲಿ ಪ್ರತ್ಯೇಕ ನೂರು ಹಾಸಿಗೆ ಸೌಲಭ್ಯ ವಿಭಾಗ ಸೇರಿ ಜಿಲ್ಲಾ ಆಸ್ಪತ್ರೆಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಿ, ಇನ್ನಷ್ಟು ಜನಸ್ನೇಹಿಗೊಳಿಸಲು ಕ್ರಮಕೈಗೊಳ್ಳಲಾಗುವುದು ಎಂದರು.

    ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಶಿವಕುಮಾರ ಮಾನಕರ, ಡಾ.ಸಿ.ಡಿ. ಕಳಸಗೌಡರ, ಡಾ.ಎಸ್.ವಿ.ಸಾನು, ಡಾ.ಶಿವಕುಮಾರ ಕುಂಬಾರ, ಉಪ ಔಷಧ ನಿಯಂತ್ರಕ ಕೆ.ಎಸ್. ಮಲ್ಲಿಕಾರ್ಜುನ, ಆರೋಗ್ಯ ಇಲಾಖೆ ಕಾರ್ಯನಿರ್ವಾಹಕ ಇಂಜಿನಿಯರ್ ಜಗನ್ನಾಥ ಜಾಧವ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸುರೇಶ, ಉಪಕರಣ ಇಂಜಿನಿಯರ್ ಲಾಳಗೆ, ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts