More

    ಜಿಲ್ಲೆಯಲ್ಲಿ ಪ್ರತ್ಯೇಕ ಅಪಘಾತ ಇಬ್ಬರು ಸಾವು

    ಹಾಸನ: ನಾಯಿ ಅಡ್ಡ ಬಂದಿದ್ದರಿಂದ ಜೋರಾಗಿ ಬ್ರೇಕ್ ಹಾಕಿದ ಪರಿಣಾಮ ಸ್ಕಿಡ್ ಆಗಿ ಗಂಭೀರ ಗಾಯಗೊಂಡ ಬೈಕ್ ಸವಾರ ಮೃತಪಟ್ಟಿರುವ ಘಟನೆ ಡೇರಿ ವೃತ್ತದ ಭಾರತ್ ಪೆಟ್ರೋಲ್ ಬಂಕ್ ಸಮೀಪ ಶುಕ್ರವಾರ ನಡೆದಿದೆ.
    ಚಿಕ್ಕಹೊನ್ನೇನಹಳ್ಳಿ ನಿವಾಸಿ ಪ್ರಕಾಶಚಾರಿ (45) ಮೃತರು. ಸರ್ಕಾರಿ ಶಾಲೆ ಶಿಕ್ಷಕರಾಗಿದ್ದ ಪ್ರಕಾಶಚಾರಿ ಅವರು ಬೂವನಹಳ್ಳಿ ಸಮೀಪದ ಕಾಫಿ ಕ್ಯೂರಿಂಗ್ ಎದುರು ಹೊಸ ಮನೆ ನಿರ್ಮಾಸುತ್ತಿದ್ದರು. ಸಂಜೆ 4ರ ಸಮಯದಲ್ಲಿ ಬೈಕ್‌ನಲ್ಲಿ ಹೋಗುತ್ತಿದ್ದಾಗ ನಾಯಿ ಅಡ್ಡಬಂದಿದೆ. ಡಿಕ್ಕಿಯಾಗುವುದನ್ನು ತಪ್ಪಿಸಲು ಜೋರಾಗಿ ಬ್ರೇಕ್ ಹಾಕಿದ್ದರಿಂದ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದು ಹಣೆ ಮತ್ತು ತಲೆಗೆ ಗಂಭೀರ ಗಾಯವಾಗಿದೆ. ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮರ್ಗಮಧ್ಯೆ ಮೃತಪಟ್ಟಿದ್ದಾರೆ. ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    ಮತ್ತೊಂದು ಪ್ರಕರಣದಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸರ್ಕಾರಿ ಶಾಲೆ ಶಿಕ್ಷಕ ಮೃತಪಟ್ಟಿರುವ ಘಟನೆ ಚನ್ನರಾಯಪಟ್ಟಣ ತಾಲ್ಲೂಕಿನ ಜೋಡಿಗಟ್ಟೆ-ಹಿರೇಹಳ್ಳಿ ಮಾರ್ಗಮಧ್ಯೆ ನಡೆದಿದೆ.
    ಶಾಂತಿಗ್ರಾಮ ಹೋಬಳಿ ದೊಡ್ಡಚಾಕನಹಳ್ಳಿ ಗ್ರಾಮದ ಡಿ.ಎಸ್.ಮಹೇಶ್ (47) ಮೃತರು. ಚನ್ನರಾಯಪಟ್ಟಣದಲ್ಲಿ ವಾಸವಿದ್ದ ಇವರು ಶುಕ್ರವಾರ ಶಾಲೆಗೆ ರಜೆ ಇದ್ದ ಕಾರಣ ತಂದೆ-ತಾಯಿ ನೋಡಿಕೊಂಡು ಬರಲು ದೊಡ್ಡಚಾಕನಹಳ್ಳಿಗೆ ತೆರಳಿದ್ದರು. ರಾತ್ರಿ 8.30ರ ಸಮಯದಲ್ಲಿ ಜೋಡಿಗಟ್ಟೆ-ಹಿರೇಹಳ್ಳಿ ರಸ್ತೆಯಲ್ಲಿ ಬರುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿಯಾಗಿ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚನ್ನರಾಯಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts