More

    ಜಿಲ್ಲೆಯಿಂದ ಜಿಲ್ಲೆಗೆ ತೆರಳಲು ಬೇಕಿಲ್ಲ ಪಾಸ್

    ಜಿಲ್ಲೆಯಿಂದ ಜಿಲ್ಲೆಗೆ, ತೆರಳಲು, ಬೇಕಿಲ್ಲ, ಪಾಸ್ ,

    ಧಾರವಾಡ: ಲಾಕ್​ಡೌನ್ ಸಂದರ್ಭದಲ್ಲಿ ಜಿಲ್ಲೆಯಿಂದ ಮತ್ತೊಂದು ಜಿಲ್ಲೆಗೆ ಪ್ರಯಾಣ ಬೆಳೆಸಲು ಜಿಲ್ಲಾಡಳಿತದ ವತಿಯಿಂದ ಇ ಪಾಸ್ ಪಡೆಯಬೇಕಿತ್ತು. ಆದರೆ, ರಾಜ್ಯ ಸರ್ಕಾರ ಮಂಗಳವಾರದಿಂದ ಬಸ್ ಸಂಚಾರ ಪ್ರಾರಂಭಿಸಿದ ಹಿನ್ನೆಲೆಯಲ್ಲಿ ಖಾಸಗಿ ವಾಹನಗಳಿಗೆ ಪಡೆಯಬೇಕಿದ್ದ ಪಾಸ್ ವ್ಯವಸ್ಥೆಯನ್ನೂ ಜಿಲ್ಲಾಡಳಿತ ರದ್ದು ಪಡಿಸಿದೆ.

    ಜಿಲ್ಲೆಗಳಿಂದ ಜಿಲ್ಲೆಗೆ ತೆರಳಲು ಪಡೆಯಬೇಕಿದ್ದ ಪಾಸ್ ವ್ಯವಸ್ಥೆಯನ್ನು ಮಾತ್ರ ರದ್ದು ಮಾಡಿದೆ. ಅಂತರ ರಾಜ್ಯಗಳಿಗೆ ಪ್ರಯಾಣ ಮಾಡುವವರು ಸೇವಾ ಸಿಂಧು ತಂತ್ರಾಂಶದ ಮೂಲಕ ಪಾಸ್​ಗಳನ್ನು ಪಡೆಯಬೇಕಿದೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 7ರವರೆಗೆ ಖಾಸಗಿ ವಾಹನಗಳೂ ಸಂಚರಿಸಲು ಅವಕಾಶವಿದೆ. ಆದರೆ, ಸರ್ಕಾರದ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಖಾಸಗಿ ವಾಹನದಲ್ಲಿ ಚಾಲಕ ಹಾಗೂ ಇಬ್ಬರಿಗೆ ಪ್ರಯಾಣ ಮಾಡಲು ಅವಕಾಶವಿದೆ. ಹೆಚ್ಚಿನ ಜನರು ಇದ್ದಲ್ಲಿ ಹಾಗೂ ಸರ್ಕಾರದ ಮಾರ್ಗಸೂಚಿಗಳನ್ನು ಪ್ರಯಾಣದ ಸಂದರ್ಭದಲ್ಲಿ ಪಾಲಿಸದಿದ್ದಲ್ಲಿ ಪೊಲೀಸರು ಸೂಕ್ತ ಕ್ರಮಕೈಗೊಳ್ಳಲು ಅವಕಾಶ ಇದೆ ಎಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ತಿಳಿಸಿದ್ದಾರೆ.

    1047 ಅನುಸೂಚಿಗಳಲ್ಲಿ ಸೇವೆ: ವಾಕರಸಾ ಸಂಸ್ಥೆಯ ವ್ಯಾಪ್ತಿಯ 6 ಜಿಲ್ಲೆಗಳಲ್ಲಿ ಮಂಗಳವಾರ 1047 ಅನುಸೂಚಿ (ಶೆಡ್ಯೂಲ್)ಗಳಲ್ಲಿ ಬಸ್​ಗಳು ಸಂಚರಿಸಿವೆ ಎಂದು ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ. ಹುಬ್ಬಳ್ಳಿ ಗ್ರಾಮಾಂತರ ವಿಭಾಗದಲ್ಲಿ 110, ಧಾರವಾಡ ಗ್ರಾಮಾಂತರ-82, ಹು-ಧಾ ನಗರ ಸಾರಿಗೆ-62, ಬೆಳಗಾವಿ-144, ಚಿಕ್ಕೋಡಿ-152, ಬಾಗಲಕೋಟೆ-202, ಗದಗ-66, ಹಾವೇರಿ-218 ಹಾಗೂ ಉತ್ತರ ಕನ್ನಡ ವಿಭಾಗದಲ್ಲಿ 11 ಅನುಸೂಚಿಗಳಲ್ಲಿ ಸಾರಿಗೆ ಕಾರ್ಯಾಚರಣೆ ಮಾಡಲಾಗಿದೆ. ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ಬಸ್​ಗಳನ್ನು ಓಡಿಸಲಾಗಿದೆ ಎಂದು ಹೇಳಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts