More

    ಜೈಲರ್ ಸಸ್ಪೆಂಡ್

    ಚಿತ್ರದುರ್ಗ: ತೀವ್ರ ತರಹದ ಕರ್ತವ್ಯಲೋಪ ಎಸಗಿದ ಆರೋಪದಡಿ ನಗರದ ಜಿಲ್ಲಾ ಕಾರಾಗೃಹದ ಜೈಲರ್ ಶ್ರೀಮಂತಗೌಡ ಪಾಟೀ ಲ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ರಾಜ್ಯ ಕಾರಾಗೃಹ ಮತ್ತು ಸುಧಾರಣೆ ಸೇವೆ ಇಲಾಖೆ ಮಹಾ ನಿರ್ದೇಶಕಿ ಮಾಲಿನಿ ಕೃಷ್ಣಮೂರ್ತಿ ಅವರು ಆದೇಶಿಸಿದ್ದಾರೆ.
    2023 ನವೆಂಬರ್ 28ರಂದು ಬಂಧಿಗಳ ನಡುವೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಗೂ ಕಾರಾಗೃಹದಲ್ಲಿ ನಿಯಮ ಬಾ ಹಿರವಾಗಿ ಬಂಧಿಗಳಿಗೆ ಸಂದರ್ಶನಕ್ಕೆ ಅವಕಾಶ ಮಾಡಿಕೊಡುತ್ತಿದ್ದರೆಂಬ ಆರೋಪ ಎದುರಿಸುತ್ತಿರುವ ಪಾಟೀಲ್ ವಿರುದ್ಧ ಶಿಸ್ತು ಕ್ರಮ ಜರು ಗಿಸುವಂತೆ ಸಂಬಂಧಿಸಿದ ಅಧಿಕಾರಿಗಳ ಶಿಫಾರಸು ಆಧರಿಸಿ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts