More

    ಜೈಲಿನಿಂದ ರಶ್ಮಿ ಬಿಡುಗಡೆ

    ಚಿತ್ರದುರ್ಗ: ಮುರುಘಾಮಠದ ಪೀಠಾಧೀಪತಿ ಶಿವಮೂರ್ತಿ ಶರಣರ ವಿರುದ್ಧದ ಪೋಕ್ಸೋ ಪ್ರಕರಣದ ಎರಡನೇ ಆರೋಪಿ ಹಾಸ್ಟೆಲ್ ವಾರ್ಡನ್ ಎಸ್.ರಶ್ಮಿಗೆ ಬುಧವಾರ ಜಿಲ್ಲಾ ಕಾರಾಗೃಹದಿಂದ ಬಿಡುಗಡೆಯಾಗಿದೆ.
    ಪ್ರಕರಣದಲ್ಲಿ ಕುಮ್ಮಕ್ಕು ನೀಡಿದ್ದ ಆರೋಪದಡಿ ಬಂಧನಕ್ಕೆ ಒಳಗಾಗಿದ್ದ ರಶ್ಮಿ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ್ದ ಹೈಕೋರ್ಟ್,ಡಿ.21ರಂದು ಷರತ್ತು ಬದ್ಧ ಜಾಮೀನು ನೀಡಿತ್ತು. ರಶ್ಮಿ ಜೈಲಿನಿಂದ ಹೊರ ಬರುವ ಮೂಲಕ ಈ ಪ್ರಕರಣದಲ್ಲಿ ಜಾಮೀನು ಪಡೆದಿರುವ ಎಲ್ಲ ಆರೋಪಿ ತರು ಜೈಲಿನಿಂದ ಬಿಡುಗಡೆ ಆದಂತಾಗಿದೆ.
    ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದ ಗ್ರಾಮಾಂತರ ಪೊಲೀಸರು ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ರಶ್ಮಿಯನ್ನು ಬಂಧಿಸಿದ್ದರು. ಎ ರಡು ಲಕ್ಷ ರೂ.ಮೊತ್ತದ ವೈಯಕ್ತಿಕ ಬಾಂಡ್ ಹಾಗೂ ಅದೇ ಮೊತ್ತಕ್ಕೆ ಇಬ್ಬರ ಭದ್ರತಾ ಖಾತ್ರಿ ಹಾಗೂ ಸಾಕ್ಷೃನಾಶಕ್ಕೆ ಯತ್ನಿಸಬಾರದೆಂಬ ಷ ರತ್ತು ವಿಧಿಸಿ ಹೈಕೋರ್ಟ್, ಜಾಮೀನು ಮಂಜೂರು ಮಾಡಿತ್ತು. ಜಾಮೀನು ಪ್ರಕ್ರಿಯೆ ಪೂರ್ಣಾನಂತರ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ರಶ್ಮಿಯನ್ನು ನ್ಯಾಯಾಂಗ ಬಂಧನದಿಂದ ಬಿಡುಗಡೆ ಮಾಡಲು ಆದೇಶಿಸಿತು.


    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts