More

    ಡಾ.ವಿಕ್ರಂ ರೆಡ್ಡಿ, ಡಾ.ಅಮರೇಶಗೆ ಶಾಂತಶ್ರೀ ಪ್ರಶಸ್ತಿ ಪ್ರದಾನ

    ಕಲಬುರಗಿ: ಶ್ರೀ ಶಾಂತಪ್ಪ ಪಾಟೀಲ್ ನರಿಬೋಳ ಪ್ರತಿಷ್ಠಾನದಿಂದ ಪರೋಪಕಾರಿ ಕನ್ನಡದ ಕಟ್ಟಾಳು ಶ್ರೀ ಶಾಂತಪ್ಪ ಪಾಟೀಲ್ ನರಿಬೋಳ ಪುಣ್ಯಸ್ಮರಣೋತ್ಸವ ನಿಮಿತ್ತ ವೈದ್ಯಕೀಯ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಯುನೈಟೆಡ್ ಆಸ್ಪತ್ರೆ ಮುಖ್ಯಸ್ಥ ಡಾ.ವಿಕ್ರಂ ಸಿದ್ದಾರೆಡ್ಡಿ ಮತ್ತು ಡಾ.ಅಮರೇಶ ಬಿರಾದಾರ್ ಅವರಿಗೆ ಶಾಂತಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು.

    ನಗರದ ಕನ್ನಡ ಭವನದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಆರೋಗ್ಯ ಕ್ಷೇತ್ರದ ವಿವಿಧ ಸ್ಥಾನಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗೆ ವಿಶೇಷ ಸನ್ಮಾನ ಮಾಡಲಾಯಿತು.

    ಶ್ರೀ ಶಿವಮೂರ್ತಿ ಶಿವಾಚಾರ್ಯ ಸಾನ್ನಿಧ್ಯ ವಹಿಸಿದ್ದರು. ಜೆಡಿಎಸ್ ಮುಖಂಡ ನಾಸೀರ್ ಹುಸೇನ್ ಉಸ್ತಾದ್, ವಿಜಯಕುಮಾರ್ ತೇಗಲತಿಪ್ಪಿ, ಶಿವಕಾಂತ ಮಹಾಜನ್, ಎಂ.ಎಸ್.ಪಾಟೀಲ್ ನರಿಬೋಳ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts