More

    ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಪ್ರತಿ ಹಳ್ಳಿಗೆ ಭೇಟಿ

    ಕೆ.ಆರ್.ನಗರ: ಕಾಂಗ್ರೆಸ್‌ಗೆ ಹೆಚ್ಚು ಮತ ಬರುತ್ತಿದ್ದ ಗ್ರಾಮಗಳು 15 ವರ್ಷಗಳಿಂದ ಅಭಿವೃದ್ಧಿ ಕಂಡಿಲ್ಲ. ಈ ಬಗ್ಗೆ ಮಾಹಿತಿ ಪಡೆಯಲಾಗಿದ್ದು, ಅಂತಹ ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಶಾಸಕ ಡಿ.ರವಿಶಂಕರ್ ಹೇಳಿದರು.

    ತಾಲೂಕಿನ ಸಿದ್ದನಕೊಪ್ಪಲು ಗ್ರಾಮದಲ್ಲಿ ಗ್ರಾಮವಿಕಾಸ ಯೋಜನೆಯಡಿ ನಿರ್ಮಾಣ ಮಾಡಲಾದ ಹತ್ತು ಜನಗಳ ಸಮುದಾಯ ಭವನವನ್ನು ಬುಧವಾರ ಉದ್ಘಾಟಿಸಿ ಮಾತನಾಡಿದ ಅವರು, ಚುನಾವಣಾ ಪೂರ್ವದಲ್ಲಿ ನೀಡಲಾದ ಐದು ಗ್ಯಾರಂಟಿಗಳನ್ನು ಜಾರಿಗೆ ತಂದ ನಂತರ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಬಿಡುಗಡೆ ಮಾಡಿಸಲಾಗುವುದು ಎಂದರು.

    ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಪ್ರತಿ ಗ್ರಾಮಕ್ಕೂ ಭೇಟಿ ನೀಡಿ ಸಾರ್ವಜನಿಕರ ಅಹವಾಲು ಆಲಿಸಲಾಗುವುದು. ಈ ಸಂದರ್ಭದಲ್ಲಿ ಹಿಂದುಳಿದ ಗ್ರಾಮಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಅಲ್ಲದೆ ಸಿದ್ದನಕೊಪ್ಪಲು ಅಭಿವೃದ್ಧಿಯಲ್ಲಿ ಹಿಂದುಳಿದಿರುವುದು ನನ್ನ ಗಮನದಲ್ಲಿದೆ ಎಂದು ತಿಳಿಸಿದರು.

    ತಹಸೀಲ್ದಾರ್ ಎಂ.ಜಿ.ಸಂತೋಷ್‌ಕುಮಾರ್, ತಾಪಂ ಇಒ ಸತೀಶ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಂಜಿತಾ, ಉಪಾಧ್ಯಕ್ಷೆ ಕುಮಾರಿ, ಸದಸ್ಯರಾದ ಈರಮ್ಮ, ಆನಂದ್, ಮಹದೇವ್, ಕುರುಬರ ಸಂಘದ ಅಧ್ಯಕ್ಷ ಚೀರ‌್ನಹಳ್ಳಿ ಶಿವಣ್ಣ, ಮುಖಂಡರಾದ ರಾಮಾಚಾರಿ, ಲಕ್ಷ್ಮಣಶೆಟ್ಟಿ, ಗೌತಮ್, ಲೋಕೇಶ್, ಪಿಡಿಒ ಮಹೇಶ್ ಮತ್ತಿತರರು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts