More

    ತೆರೆದ ವಾಹನದಲ್ಲಿ ಬೃಹತ್ ಮೆರವಣಿಗೆ

    ಎನ್.ಮಹೇಶ್ ಉಮೇದುವಾರಿಕೆ ಸಲ್ಲಿಕೆ

    • ಕೊಳ್ಳೇಗಾಲ: ಕೊಳ್ಳೇಗಾಲ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎನ್.ಮಹೇಶ್ ಜನಸ್ತೋಮದ ನಡುವೆ ಬುಧವಾರ ನಾಮಪತ್ರ ಸಲ್ಲಿಸಿದರು.

    • ಪಟ್ಟಣದ ಶ್ರೀ ವರಸಿದ್ಧಿ ವಿನಾಯಕ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಬಳಿಕ ಡಾ.ವಿಷ್ಣುವರ್ಧನ್ ರಸ್ತೆ ಮೂಲಕ ಪ್ರಮುಖ ರಸ್ತೆಗಳಲ್ಲಿ ಸಾವಿರಾರು ಜನರ ಜತೆಗೂಡಿ ತೆರೆದ ಗಾಡಿಯಲ್ಲಿ ಮೆರವಣಿಗೆ ಮೂಲಕ ಸಾಗಿದ ಎನ್.ಮಹೇಶ್, ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಆಶೀರ್ವಾದ ಪಡೆದರು.

    • ಮೆರವಣಿಗೆ ಉದ್ದಕ್ಕೂ ಎನ್.ಮಹೇಶ್ ಪರ ಜೈಕಾರ ಮೊಳಗಿದವು. ಬಿಜೆಪಿ ಬಾವುಟ ರಾರಾಜಿಸಿತು. ಕಾರ್ಯಕರ್ತರು ಡೋಲು, ವಾದ್ಯಮೇಳಕ್ಕೆ ಕುಣಿದು ಕುಪ್ಪಳಿಸಿದರು. ಸಂಸದ ಪ್ರತಾಪ್ ಸಿಂಹ, ಚಿತ್ರನಟ ಪ್ರಥಮ್, ಚಿತ್ರ ನಿರ್ದೇಶಕ ಎಸ್. ಮಹೇಂದರ್, ಮಾಜಿ ಎಂಎಲ್‌ಸಿ ಸಿದ್ದರಾಜು, ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ, ಚಾಮುಲ್ ಅಧ್ಯಕ್ಷ ನಾಗೇಂದ್ರ, ಜಿಲ್ಲಾ ವಕ್ತಾರ ಬಸವರಾಜಪ್ಪ, ನಗರ ಮಂಡಲ ಅಧ್ಯಕ್ಷ ರಮೇಶ್ ಮೂರಾರಿ, ಕರ್ನಾಟಕ ಮೃಗಾಲಯ ಪ್ರಾಧಿಕಾರದ ನಿರ್ದೇಶಕಿ ಜ್ಯೋತಿ ರೇಚಣ್ಣ ಸಾಥ್ ನೀಡಿದರು. ನಂತರ ತಾಲೂಕು ಕಚೇರಿಗೆ ತೆರಳಿ ಉಪವಿಭಾಗಾಧಿಕಾರಿ ಗೀತಾ ಹುಡೇದ ಅವರಿಗೆ ನಾಮಪತ್ರ ಸಲ್ಲಿಸಿದರು.

    • ಶಾಸಕ ಎನ್.ಮಹೇಶ್ ಮಾತನಾಡಿ, ನಾಮಪತ್ರ ಸಲ್ಲಿಕೆಗೆ ನಿರೀಕ್ಷೆಗೂ ಮೀರಿದ ಸಂಖ್ಯೆಯಲ್ಲಿ ಕಾರ್ಯಕರ್ತರು ಹಾಗೂ ಮತದಾರರು ಸೇರಿದ್ದಾರೆ. ಅವರೆಲ್ಲರಿಗೂ ಮನಪೂರ್ವಕ ಧನ್ಯವಾದ ತಿಳುಸುತ್ತೇನೆ. ಚಿತ್ರನಟ ಪ್ರಥಮ್ ಹಾಗೂ ನಿರ್ದೇಶಕ ಮಹೇಂದರ್ ಬಂದಿರುವುದು ವಿಶೇಷ. ಜನರನ್ನು ನೋಡಿದರೆ 1 ಲಕ್ಷಕ್ಕೂ ಅಧಿಕ ಮತದಿಂದ ನಿರಾಯಾಸವಾಗಿ ಗೆಲುವು ಸಾಧಿಸುತ್ತೇನೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts