More

    ತ್ಯಾಗರ್ತಿಯ ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿಗೂ ಮೊದಲೇ ಧ್ವಜ ಅವರೋಹಣ!

    ತ್ಯಾಗರ್ತಿ: ಅವಧಿಗೆ ಮುನ್ನವೇ ರಾಷ್ಟ್ರಧ್ವಜ ಇಳಿಸಿದ ಘಟನೆ ಇಲ್ಲಿನ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಸೋಮವಾರ ನಡೆದಿದೆ. ವೈದ್ಯಾಧಿಕಾರಿಗಳು ಆಸ್ಪತ್ರೆ ಆವರಣದಲ್ಲಿ ಬೆಳಗ್ಗೆ ಧ್ವಜಾರೋಹಣ ನೆರವೇರಿಸಿ ಸಂಜೆ ಧ್ವಜ ಇಳಿಸಲು ಸಿಬ್ಬಂದಿಗೆ ಸೂಚಿಸಿದ್ದರು. ಆದರೆ ಮಧ್ಯಾಹ್ನ 3 ಗಂಟೆ ವೇಳೆಗೆ ಯಾರೂ ಇಲ್ಲದಿದ್ದಾಗ ಕಿಡಿಗೇಡಿಗಳ್ಯಾರೋ ಧ್ವಜ ಇಳಿಸಿ, ಆಸ್ಪತ್ರೆ ಮೇಲ್ಭಾಗದಲ್ಲಿ ಇರಿಸಿದ್ದಾರೆ. ವೈದ್ಯಾಧಿಕಾರಿ ಡಾ. ಶ್ರೀದೇವಿ ಈ ಸಂಬಂಧ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಘಟನೆ ಬಗ್ಗೆ ಸೂಕ್ತ ವಿವರಣೆ ನೀಡಬೇಕು.ತಪ್ಪಿಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗ್ರಾಪಂ ಉಪಾಧ್ಯಕ್ಷ ಇಸಾಕ್ ಆಗ್ರಹಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts