More

    ದೇವಸ್ಥಾನದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಕಿಡಿಗೇಡಿ

    ಗುತ್ತಲ: ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಅನ್ಯ ಕೋಮಿನ ಯುವಕನೋರ್ವ ಮೂತ್ರ ವಿಸರ್ಜನೆ ಮಾಡಿ ಧಾರ್ವಿುಕ ಭಾವನೆಗೆ ಧಕ್ಕೆ ತಂದ ಘಟನೆ ಸಮೀಪದ ಕನವಳ್ಳಿ ಗ್ರಾಮದಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ.

    ಗ್ರಾಮದ ಜಾಫರ್ ಹನೀಫ್​ಸಾಬ್ ಕನ್ಯಾನವರ(30) ಎಂಬ ಯುವಕ ಉದ್ದೇಶಪೂರ್ವಕವಾಗಿ ಗ್ರಾಮದಲ್ಲಿ ಕನ್ನಡ ಪ್ರಾಥಮಿಕ ಶಾಲಾ ಆವರಣದಲ್ಲಿರುವ ಆಂಜನೇಯ ದೇವಸ್ಥಾನದ ಆವರಣಕ್ಕೆ ಪ್ರವೇಶಿಸಿ ಯಾರೂ ಇಲ್ಲದ್ದನ್ನು ನೋಡಿ ಮೂತ್ರ ವಿಸರ್ಜನೆ ಮಾಡಿದ್ದಾನೆ. ಈ ದೃಶ್ಯ ದೇವಸ್ಥಾನದಲ್ಲಿ ಅಳವಡಿಸಿರುವ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಅಲ್ಲದೆ, ದೇವಸ್ಥಾನದ ಹತ್ತಿರ ಇದ್ದ ಕೆಲವ ಯುವಕರು ಕಣ್ಣಾರೆ ನೋಡಿ ದೇವಸ್ಥಾನ ಆಡಳಿತ ಮಂಡಳಿಯವರಿಗೆ ವಿಷಯ ತಿಳಿಸಿದ್ದಾರೆ. ನಂತರ ಸ್ಥಳಕ್ಕೆ ಆಗಮಿಸಿದ ಕಮೀಟಿ ಸದಸ್ಯರು, ಸಿಸಿ ಟಿವಿ ಪರಿಶೀಲಿಸಿ ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ.

    ವಿಷಯ ತಿಳಿದ ಗ್ರಾಮಸ್ಥರು ದೇವಸ್ಥಾನದ ಆವರಣದಲ್ಲಿ ಗುಂಪುಗೂಡಿ ಕೆಲ ಕಾಲ ಪ್ರತಿಭಟನೆ ನಡೆಸಿದರು. ಕೂಡಲೆ ಆರೋಪಿಯನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು. ಪರಿಸ್ಥಿತಿ ಅರಿತ ಗುತ್ತಲ ಠಾಣೆ ಪಿಎಸ್​ಐ ಜಿ. ಜಗದೀಶ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾ ನಿರತರಿಂದ ಮಾಹಿತಿ ಪಡೆದರು. ಕೃತ್ಯ ಎಸಗಿರುವ ಆರೋಪಿಯನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನಂತರ ಸಾರ್ವಜನಿಕರು ಪ್ರತಿಭಟನೆ ಹಿಂಪಡೆದರು.

    ದೇವಸ್ಥಾನ ಕಮಿಟಿ ಅಧ್ಯಕ್ಷ ಮಂಜುನಾಥ ಸಿದ್ದಗೋಳಪ್ಪನವರ ಘಟನೆ ಕುರಿತು ಜಾಫರ ಕನ್ಯಾನವರ ಉದ್ದೇಶ ಪೂರ್ವಕವಾಗಿ ಹಾಗೂ ಧಾರ್ವಿುಕ ಭಾವನೆಗೆ ಧಕ್ಕೆ ತರುವ ಉದ್ದೇಶದಿಂದ ದೇವಸ್ಥಾನದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದಾನೆ ಎಂದು ಗುತ್ತಲ ಠಾಣೆಯಲ್ಲಿ ದೂರು ನೀಡಿದ್ದಾರೆ. ಗುತ್ತಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯ ಸೆರೆಗೆ ಜಾಲ ಬೀಸಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts