More

    ದೇಶಕ್ಕಾಗಿ ಅಂಬೇಡ್ಕರ್ ಜೀವನ ಮುಡಿಪಿಟ್ಟರು; ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದರಾಜ ಕಲಕೋಟಿ

    ಸಂವಿಧಾನವನ್ನು ರಚಿಸುವ ಮೂಲಕ ಡಾ.ಬಿ.ಆರ್.ಅಂಬೇಡ್ಕರ್ ಅವರು ದೇಶದ ಪ್ರತಿಯೊಬ್ಬ ನಾಗರಿಕರೂ ಸಮಾನವಾಗಿ ಬದುಕುವಂತೆ ಮಾಡಿದರು. ದೀನ ದಲಿತರ ಉದ್ದಾರಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟರು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದರಾಜ ಕಲಕೋಟಿ ಹೇಳಿದರು.
    ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಮಂಗಳವಾರ ಆಯೋಜಿಸಿದ್ದ ಡಾ.ಬಿ.ಆರ್‌ಅಂಬೇಡ್ಕರ್ ಅವರ 66ನೇ ಪರಿನಿರ್ವಾಣ ದಿನಾಚರಣೆ ಸಮಾರಂಭದಲ್ಲಿ ಅವರು ಮಾತನಾಡಿದರು.
    ಹಕ್ಕು ಮತ್ತು ಕರ್ತವ್ಯಗಳನ್ನು ಪಾಲಿಸಿ ಸಮಾಜದ ಸ್ವಾಸ್ಥೃ ಕಾಪಾಡಲು ಲಿಖಿತ ರೂಪದ ಕಾನೂನು ಜಾರಿಗೆ ತಂದರು. ದೇಶದ ಸಾಮಾನ್ಯ ವ್ಯಕ್ತಿಯು ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಉನ್ನತ ಹುದ್ದೆ ಅಲಂಕರಿಸಿ ಸಮಾಜದ ಸಮಾನತೆಯನ್ನು ಸಾರುವುದರ ಮೂಲಕ ಮಾನವೀಯತೆಯಿಂದ ಬದುಕು ಕಟ್ಟಿಕೊಳ್ಳಲು ಅನುವು ಮಾಡಿಕೊಟ್ಟರು. ಈ ಮೂಲಕ ದೇಶದ ಜನತೆಗೆ ಆದರ್ಶಪ್ರಾಯರಾಗಿದ್ದಾರೆ ಎಂದರು.
    ಈ ವೇಳೆ ಬಿಜೆಪಿ ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜಕುಮಾರ ಬಸವ, ಜಿಲ್ಲಾ ಪ್ರಭಾರಿ ಎಲ್.ಎನ್.ಕಲ್ಲೇಶ, ಮಾಜಿ ಶಾಸಕ ಶಿವರಾಜ ಸಜ್ಜನರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೃಷ್ಣಾ ಈಳಗೇರ, ಶಶಿಧರ ಹೊಸಳ್ಳಿ, ರುದ್ರೇಶ ಚಿನ್ನಣ್ಣನವರ, ರಾಜ್ಯ ಒಬಿಸಿ ಮೋರ್ಚಾ ಉಪಾಧ್ಯಕ್ಷ ಭೋಜರಾಜ ಕರೂದಿ, ಜಿಲ್ಲಾ ಕಾರ್ಯದರ್ಶಿ ಡಾ.ಸಂತೋಷ ಆಲದಕಟ್ಟಿ, ಇತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts