More

    ದೇಶದ ಭವಿಷ್ಯ ರೂಪಿಸುವ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಬೆಂಬಲಿಸಿ- ಸಚಿವ ಪ್ರಿಯಾಂಕ್ ಖರ್ಗೆ.

    ಕಲಬುರಗಿ: ದೇಶದ ಭವಿಷ್ಯ ರೂಪಿಸುವ ಚುನಾವಣೆ ಇದಾಗಿದ್ದು ಪ್ರಭಾವಿ ಸಮುದಾಯದವರಾದ ನೀವೆಲ್ಲ. ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಕ್ಕೆ ನಿಲ್ಲಬೇಕು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ‌ ಮನವಿ ಮಾಡಿದರು.

    ನಗರದ ನೀಲಾಂಬಿಕಾ ಕಲ್ಯಾಣ ಮಂಟಪದಲ್ಲಿ ನಡೆದ ಲಿಂಗಾಯತ ರೆಡ್ಡಿ ಸಮುದಾಯದ ವತಿಯಿಂದ ಏರ್ಪಡಿಸಲಾಗದ ಚುನಾವಣೆ ಪ್ರಚಾರ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.

    ಲಿಂಗಾಯತ ರೆಡ್ಡಿ‌ ಸಮುದಾಯ ನಾಯಕರು ರಾಜಕೀಯವಾಗಿ ಪ್ರಭಾವಿಗಳಾಗಿದ್ದು ಅಭಿವೃದ್ದಿಯ ಪರವಾಗಿದ್ದಾರೆ. ಕಳೆದ ಚುನಾವಣೆಯಲ್ಲಿ ಖರ್ಗೆ ಸಾಹೇಬರು ಸೋತಿದ್ದರಿಂದ ಕ್ಷೇತ್ರದ ಅಭಿವೃದ್ದಿ ಕುಂಠಿತಗೊಂಡಿದೆ. ಹೀಗಾಗಿ ನೀವೆಲ್ಲ ಈ ಸಲ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಮೂಲಕ ಅಭಿವೃದ್ದಿಗೆ ಸಹಕರಿಸಿ ಎಂದು ವಿನಂತಿಸಿದರು.

    ತಾವು ಅಪ್ಪಟ ಬಸವ ಪ್ರೇಮಿಯಾಗಿದ್ದು ಅವರ ತತ್ವಗಳಲ್ಲಿ ಅಪಾರ ನಂಬಿಕೆ ಇಟ್ಟುಕೊಂಡಿರುವುದಾಗಿ ಹೇಳಿದ ಖರ್ಗೆ, ಹಿಂದಿನ ಬಿಜೆಪಿ ಸರ್ಕಾರ ಪಠ್ಯಗಳಲ್ಲಿ ಬಸವಣ್ಣನವರ ಕುರಿತ ಪಾಠಗಳನ್ನು ಕೈಬಿಟ್ಟಾಗ ಪ್ರತಿಭಟನೆ ಮಾಡಿರುವುದಾಗಿ ನೆನಪಿಸಿಕೊಂಡರು. ಸಚಿವ ಶರಣಬಸಪ್ಪ ದರ್ಶನಾಪುರ ಅವರೊಂದಿಗೆ ಸಿಎಂ ಅವರೊಂದಿಗೆ ಚರ್ಚಿಸಿ‌ ಬಸವಣ್ಣನವರನ್ನು ರಾಜ್ಯದ ಸಾಂಸ್ಕೃತಿಕ ‌ನಾಯಕರೆಂದು ಘೋಷಿಸಲು ಶ್ರಮಿಸಿದ್ದಾಗಿ ಹೇಳಿದರು.

    ಕಲಬುರಗಿ ಹೊರವಲಯದಲ್ಲಿ ಹೇಮರೆಡ್ಡಿ ಮಲ್ಲಮ್ಮ ಸಮುದಾಯ ಭವನ ನಿರ್ಮಾಣ ಮಾಡಲು ಸಿದ್ದರಿರುವುದಾಗಿ ಹೇಳಿದ ಸಚಿವರು, ಈ ವಿಚಾರಕ್ಕೆ ದರ್ಶನಾಪುರ ಸಾಹೇಬರು ಮಾರ್ಗದರ್ಶನ ನೀಡಬೇಕು ಎಂದರು.

    ಸಚಿವ ಶರಣಬಸಪ್ಪ ದರ್ಶನಾಪುರ ಹಾಗೂ ರಾಮಲಿಂಗಾರೆಡ್ಡಿ ಮಾತನಾಡಿ ಸಮುದಾಯದ ಬಂಧುಗಳು ಧರ್ಮಗಳ ನಡುವೆ ಭಿನ್ನತೆ ಮೂಡಿಸುವ ಬಿಜೆಪಿಯನ್ನು ತಿರಸ್ಕರಿಸಿ ಎಲ್ಲರನ್ನೂ ಒಂದಾಗಿ ತೆಗೆದುಕೊಂಡು ಹೋಗುವ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಮೂಲಕ ಬಸವಣ್ಣನವರ ಹಾಗೂ ಹೇಮರೆಡ್ಡಿ ಮಲ್ಲಮ್ಮನವರ ಸಮಾನತೆ ತತ್ವವನ್ನು ಎತ್ತಿ‌ಹಿಡಿಯಬೇಕು ಎಂದು ಹೇಳಿದರು.

    ಈ ಸಂದರ್ಭದಲ್ಲಿ ಅಭ್ಯರ್ಥಿ ರಾಧಾಕೃಷ್ಣ ಅವರು ಮತಯಾಚಿಸಿದರು.

    ಅಭ್ಯರ್ಥಿ ಯನ್ನು ಮುಖಂಡ ಭೀಮರೆಡ್ಡಿ ಪಾಟೀಲ್ ಸನ್ಮಾನಿಸುವ ಮೂಲಕ ಸ್ವಾಗತಿಸಿದರು. ಮಾಜಿ ಉಪಮಹಾಪೌರ ಮಹೇಶ ಹೊಸೂರ್ ಕರ್ ನಿರೂಪಿಸಿದರು. ಶಾಂತರೆಡ್ಡಿ ಪೇಟ‌ ಶಿರೂರು ವಂದನಾರ್ಪಣೆ ಮಾಡಿದರು.

    ವೇದಿಕೆಯ ಮೇಲೆ ಭಾಗನಗೌಡ ಸಂಕನೂರು, ಡಾ ಕಾಮರೆಡ್ಡಿ, ವೀರನಗೌಡ ಪರಸರೆಡ್ಡಿ ಸೇರಿದಂತೆ ಹಲವರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts