More

    ದೇಶಾದ್ಯಂತ ಕಾಂಗ್ರೆಸ್ ಮುನ್ನಡೆ ಸಾಧಿಸಲಿದೆ – ಸಚಿವ ಸತೀಶ ಜಾರಕಿಹೊಳಿ

    ಗೋಕಾಕ: ಎರಡು ತಿಂಗಳಿಂದ ಚುನಾವಣಾ ಮೂಡ್‌ನಲ್ಲಿದ್ದ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಚುನಾವಣೆ ಮುಗಿದ ಮರುದಿನ ಬುಧವಾರ ಆಪ್ತರೊಂದಿಗೆ ರಿಲ್ಯಾಕ್ಸ್ ಮೂಡ್‌ನಲ್ಲಿ ಕಾಣಿಸಿಕೊಂಡರು.

    ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿರುವ ಶೆಟ್ಟಿ ಸ್ವೀಟ್ಸ್ ಅಂಗಡಿಯಲ್ಲಿ 2 ಗಂಟೆಗೂ ಹೆಚ್ಚು ಕಾಲ ಚುನಾವಣೋತ್ತರ ಸಮಾಲೋಚನೆ ನಡೆಸಿದರು. ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಪರ 8 ವಿಧಾನಸಭೆ ಕ್ಷೇತ್ರಗಳು ಸೇರಿ ರಾಜ್ಯದ ಹಲವಾರು ಕಡೆಗಳಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ, ರ‌್ಯಾಲಿಗಳಲ್ಲಿ ಭಾಗವಹಿಸಿದ್ದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಅಷ್ಟೇ ಅಲ್ಲ, ದೇಶಾದ್ಯಂತ ಮತದಾರರು ಕಾಂಗ್ರೆಸ್‌ಗೆ ಬೆಂಬಲಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಗ್ಯಾರಂಟಿಗಳು ಕೈ ಅಭ್ಯರ್ಥಿಗಳನ್ನು ಗೆಲ್ಲಿಸಲಿವೆ.

    ರಾಜ್ಯದ 28 ಕ್ಷೇತ್ರಗಳಲ್ಲಿ 15 ರಿಂದ 16 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಮತ್ತು ಬೆಳಗಾವಿ ಲೋಕಸಭಾ ಕ್ಷೇತ್ರದ ಇಬ್ಬರೂ ಅಭ್ಯರ್ಥಿಗಳು ಹೆಚ್ಚಿನ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಹೇಳಿದರು.

    ಮುಖಂಡರಾದ ಚಂದ್ರಶೇಖರ ಕೊಣ್ಣೂರ, ಬಸವರಾಜ ಖಾನಪ್ಪನವರ, ಆರೀಫ್ ಪೀರಜಾದೆ, ರಮೇಶ ಬಿಲಕುಂದಿ, ಬಸಶೆಟ್ಟಿ ಶೆಟ್ಟಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts