More

    ಧಾರವಾಡದ ಜನರಲ್ಲಿ ಆತಂಕ ಸೃಷ್ಟಿಸಿದ್ದ ಶವ

    ಧಾರವಾಡ: ನಗರದ ಮಾರುಕಟ್ಟೆ ಪ್ರದೇಶದ ಹೋಟೆಲ್ ಒಂದರ ಮುಂಭಾಗದಲ್ಲಿ ಬೆಳ್ಳಂಬೆಳಗ್ಗೆ ಪತ್ತೆಯಾದ ಶವವೊಂದು ಕೆಲ ಹೊತ್ತು ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿತ್ತು.

    ಇಲ್ಲಿನ ಕೆಸಿಸಿ ಬ್ಯಾಂಕ್ ಪಕ್ಕದಲ್ಲಿನ ಹೋಟೆಲ್ ಎದುರಿನಲ್ಲಿ ವ್ಯಕ್ತಿಯೊಬ್ಬನ ಶವ ಮಲಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಆತನ ಮೂಗಿನಲ್ಲಿ ರಕ್ತಸ್ರಾವ ಸಹ ಉಂಟಾಗಿತ್ತು. ಕರೊನಾ ಹಾವಳಿ ಮಧ್ಯೆ ಶವವನ್ನು ಕಂಡ ಜನರು ಕೂಡಲೆ ಜಿಲ್ಲಾಡಳಿತದ ಕಂಟ್ರೋಲ್ ರೂಂ, ಆಂಬುಲೆನ್ಸ್ ಸಿಬ್ಬಂದಿ ಹಾಗೂ ಪಾಲಿಕೆ ಅಧಿಕಾರಿಗಳಿಗೂ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಆಗಮಿಸಿದ ಆಂಬುಲೆನ್ಸ್ ಸಿಬ್ಬಂದಿ ಶವದ ಸ್ಥಿತಿ ಗಮನಿಸಿ, ಶವ ಸಾಗಿಸಲು ಪಿಪಿಇ ಕಿಟ್ ಇಲ್ಲದ ಹಿನ್ನೆಲೆಯಲ್ಲಿ ನಿರಾಕರಿಸಿ ಮರಳಿದರು.

    ಸ್ಥಳ ಪರಿಶೀಲನೆಗೆ ಆಗಮಿಸಿದ ನಗರ ಠಾಣೆ ಪೊಲೀಸರು ಸಹ ಶವ ಸಾಗಿಸಲು ವ್ಯವಸ್ಥೆಗೆ ಪ್ರಯತ್ನ ನಡೆಸಿದ್ದರು. ಅಷ್ಟರಲ್ಲಿ ಮೃತನ ಸಂಬಂಧಿಕರು ಆಗಮಿಸಿ, ಆತ ತಮ್ಮವನೇ ಎಂದು ಗುರುತು ಹಿಡಿದು ಶವವನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಿದರು.

    ಗಾಂಧಿಚೌಕ್ ಬಳಿಯ ಬಸ್ತಿ ಓಣಿಯ ರಫೀಕ್​ಅಹ್ಮದ್ ದಾವಲ್​ಸಾಬ್ ಬಿಸ್ತೆ (42) ಮೃತ ವ್ಯಕ್ತಿ. ಈತ ಕೆಲ ವರ್ಷಗಳಿಂದ ಕುಡಿತದ ಚಟಕ್ಕೆ ಅಂಟಿಕೊಂಡಿದ್ದ. ಗುರುವಾರ ರಾತ್ರಿ ಮನೆಯಿಂದ ತೆರಳಿದ್ದ ಈತ ವಾಪಸ್ ಬರದ ಹಿನ್ನೆಲೆಯಲ್ಲಿ ಹುಡುಕಾಟ ನಡೆಸಿದ್ದೆವು ಎಂದು ಆತನ ಬಂಧುಗಳು ಪೊಲೀಸರಿಗೆ ಮಾಹಿತಿ ಸಹ ನೀಡಿದ್ದಾರೆ.

    ಶವ ಪತ್ತೆ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲಾ ಆಸ್ಪತ್ರೆ ವೈದ್ಯರು ಮರಣೋತ್ತರ ಪರೀಕ್ಷೆ ನಡೆಸಿದ್ದು, ವರದಿ ಬರಬೇಕಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts