More

    ಧಾರವಾಡ ಜಿಲ್ಲೆಯಲ್ಲಿ 246 ಕೋವಿಡ್ ಪ್ರಕರಣ ಪತ್ತೆ

    ಧಾರವಾಡ: ಜಿಲ್ಲೆಯಲ್ಲಿ ಮಂಗಳವಾರ ಕೇವಲ 56 ಕೋವಿಡ್ ಪ್ರಕರಣ ಪತ್ತೆಯಾಗಿದ್ದವು. ಒಂದೇ ದಿನದಲ್ಲಿ ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆಯಾಗಿದ್ದು, ಬುಧವಾರ 246 ಜನರಲ್ಲಿ ಸೋಂಕು ಪತ್ತೆಯಾಗಿದೆ. ವೈದ್ಯರ ವೇತನ ಪರಿಷ್ಕರಣೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳು ಅಸಹಕಾರ ಚಳವಳಿ ನಡೆಸುತ್ತಿದ್ದಾರೆ. ಜಿಲ್ಲಾ ಸಂಘವೂ ಬೆಂಬಲಿಸಿದ್ದು, 2ನೇ ದಿನವೂ ಮುಂದುವರಿಯಿತು. ವೈದ್ಯರು ಹಗಲಿರುಳು ಕರೊನಾ ವಿರುದ್ಧ ತಮ್ಮ ಜೀವನ ಪಣಕ್ಕಿಟ್ಟು ಕಾರ್ಯನಿರ್ವಹಿಸುತ್ತಿದ್ದಾರೆ. ಆದರೂ ಹಲವು ವರ್ಷಗಳಿಂದ ವೇತನ ಪರಿಷ್ಕರಣೆಗೆ ಆಗ್ರಹಿಸುತ್ತಿದ್ದರೂ ಸರ್ಕಾರ ಗಮನ ಹರಿಸಿಲ್ಲ. ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಕೋವಿಡ್​ಗೆ ಚಿಕಿತ್ಸೆ ನೀಡಿದರೂ ಸರ್ಕಾರಕ್ಕೆ ಅಂಕಿ ಅಂಶ ಸಲ್ಲಿಸುತ್ತಿಲ್ಲ. ಸಾರ್ವಜನಿಕ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿಸಿದರೂ ದೈನಂದಿನ ಅಂಕಿ ಅಂಶ ನೀಡಿಲ್ಲ. ಅಲ್ಲದೆ, ವಿಡಿಯೋ ಕಾನ್ಪರೆನ್ಸ್, ಸಭೆಗೆ ಹಾಜರಾಗುವುದಿಲ್ಲ ಎಂದು ವೈದ್ಯರು ಹೇಳಿದ್ದರು. ಆದರೆ ಬುಧವಾರ ಜಿಲ್ಲಾ ಮಟ್ಟದ ಸಭೆಗಳು ನಿಗದಿಯಾಗಿರಲಿಲ್ಲ ಎಂದು ವೈದ್ಯಾಧಿಕಾರಿಯೊಬ್ಬರು ಪ್ರತಿಕ್ರಿಯಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts