More

    ನಕಲಿ ವೈದ್ಯರೆಂದು ಬಿಂಬಿಸುತ್ತಿರುವುದಕ್ಕೆ ವಿರೋಧ

    ಚಿತ್ರದುರ್ಗ: ಕ್ಲಿನಿಕ್‌ಗಳ ಮೇಲೆ ಇತ್ತೀಚೆಗೆ ದಾಳಿ ನಡೆಸಿ, ನಕಲಿ ವೈದ್ಯರೆಂದು ಬಿಂಬಿಸುತ್ತಿರುವುದನ್ನು ವಿರೋಧಿಸಿ ಆಯುಷ್ ಫೆಡರೇಷನ್ ಆಫ್ ಇಂಡಿಯಾ ಜಿಲ್ಲಾ ಶಾಖೆ ಪದಾಧಿಕಾರಿಗಳು ಗುರುವಾರ ಪ್ರತಿಭಟನೆ ನಡೆಸಿದರು.

    ಕರ್ನಾಟಕ ಪ್ರಾಕ್ಟಿಷನರ್ ಮೆಡಿಕಲ್ ಎಸ್ಟಾಬ್ಲಿಷ್‌ಮೆಂಟ್ ಕಾಯ್ದೆ ಅನ್ವಯ ನೋಂದಾಯಿತ ವೈದ್ಯರ ಮೇಲೆ ದಾಳಿ ನಡೆಸಿ, ನಕಲಿ ಎಂಬುದಾಗಿ ಹೇಳುವುದನ್ನು ತಡೆಯಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿ ಜಿಲ್ಲಾಡಳಿತದ ಮೂಲಕ ಮನವಿ ರವಾನಿಸಿದರು.

    ಅನರ್ಹರ ವಿರುದ್ಧ ಕ್ರಮ ಕೈಗೊಳ್ಳಲಿ. ಆದರೆ, ಅಧಿಕಾರಿಗಳು ದಾಳಿ ನಡೆಸಿದ ವೇಳೆ ವೈದ್ಯರೆನ್ನುವ ಗೌರವ ನೀಡದೆ, ಕೈಗೆ ಸಿಕ್ಕ ವಸ್ತುಗಳನ್ನೆಲ್ಲ ಚೆಲ್ಲಾಪಿಲ್ಲಿಯಾಗಿಸಿ, ಅವಮಾನಿಸಲು ಮುಂದಾಗುತ್ತಿದ್ದಾರೆ. ಆದ್ದರಿಂದ ವೈದ್ಯರ ಕುಂದುಕೊರತೆ ವಿಚಾರಣಾ ಸಮಿತಿಗೆ ಆಯುಷ್ ಹಾಗೂ ಆಯುರ್ವೇದ ವ್ಯೆದ್ಯರೊಬ್ಬರನ್ನು ನೇಮಿಸಿಕೊಳ್ಳಬೇಕು ಎಂದು ಕೋರಿದರು.

    ಜಿಲ್ಲಾ ಶಾಖೆ ಅಧ್ಯಕ್ಷ ಡಾ.ಜಿ.ಎಸ್.ಗೋಪಾಲಕೃಷ್ಣ, ಕಾರ್ಯದರ್ಶಿ ಡಾ.ಮಹಮದ್ ಖಾಸಿಂ, ಆಯುಷ್ ವೈದ್ಯರಾದ ಲಿಂಗದೊರೆ, ಪ್ರಶಾಂತ್ ಅನೇಕ ವೈದ್ಯರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts