ಶಿವಮೊಗ್ಗ: ನಗರದ ಜೆ.ಜೆ.ಸೂರ್ಯ ಕಾಲೇಜ್ ಆ್ ನರ್ಸಿಂಗ್ನಲ್ಲಿ ಮೂಲ ಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ರಾಷ್ಟ್ರೀಯ ಮಜ್ದೂರ್ ಕಾಂಗ್ರೆಸ್ ಜಿಲ್ಲಾ ವಿದ್ಯಾರ್ಥಿ ಘಟಕದ ನೇತೃತ್ವದಲ್ಲಿ ಡಿಸಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ಮೂಲ ಸೌಕರ್ಯ ಮರಿಚೀಕೆ ಆಗಿರುವುದರಿಂದ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಸಮರ್ಪಕವಾಗಿ ನೀರು, ವಿದ್ಯುತ್ ಸೌಲಭ್ಯವಿಲ್ಲ. ಶಿಕ್ಷಕರ ಕೊರತೆಯಿದೆ. ಸಾಂಸ್ಕೃತಿಕ ಚಟುವಟಿಕೆಗಳು ನಡೆಯುತ್ತಿಲ್ಲ. ಸರಿಯಾಗಿ ವಿದ್ಯಾರ್ಥಿ ವೇತನ ದೊರೆಯುತ್ತಿಲ್ಲ. ಸಮವಸ ನೀಡುತ್ತಿಲ್ಲ. ಪದೇಪದೆ ಕಾಲೇಜಿನ ಸ್ಥಳವನ್ನು ಬದಲಾವಣೆ ಮಾಡಲಾಗುತ್ತಿದೆ. ಸೂಕ್ತ ಗ್ರಂಥಾಲಯ ಸೌಲಭ್ಯವಿಲ್ಲ. ಹಲವು ವಿಭಾಗಗಳಿಗೆ ಮುಖ್ಯಸ್ಥರಿಲ್ಲ ಎಂದು ಪ್ರತಿಭಟನಾನಿರತರು ದೂರಿದರು.
ರಾಷ್ಟ್ರೀಯ ಮಜ್ದೂರ್ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ವಿನಯ್ ಬೊಮ್ಮನಕಟ್ಟೆ, ಎನ್ಎಸ್ಯುಐ ರಾಜ್ಯ ಕಾರ್ಯದರ್ಶಿ ಬಾಲಾಜಿ, ಯುವ ಕಾಂಗ್ರೆಸ್ ದಕ್ಷಿಣ ಬ್ಲಾಕ್ ಅಧ್ಯಕ್ಷ ವಿನಯ್ ತಾಂದ್ಲೆ, ಪ್ರಮುಖರಾದ ಮಂಜು ಪುರಲೆ, ಸುದೀಪ್, ನರ್ಸಿಂಗ್ ಕಾಲೇಜಿನ ಹಲವು ವಿದ್ಯಾರ್ಥಿನಿಯರು ಪ್ರತಿಭಟನೆಯಲ್ಲಿದ್ದರು.