More

    ನರೇಗಾ ಸದುಪಯೋಗ ಪಡೆದುಕೊಳ್ಳಿ

    ಚಿತ್ತಾಪುರ: ಗ್ರಾಮೀಣ ಜನರು ಮತ್ತು ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಬದು ನಿರ್ಮಾಣ ಕಾಮಗಾರಿಗೆ ಆದ್ಯತೆ ನೀಡಲಾಗಿದ್ದು, ರೈತರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ತಾಲೂಕು ಪಂಚಾಯಿತಿ ಅಧ್ಯಕ್ಷ ಜಗಣ್ಣಗೌಡ ರಾಮತೀರ್ಥ ಹೇಳಿದರು.
    ಹೊಸ್ಸುರ್ ಗ್ರಾಮದಲ್ಲಿ ನರೇಗಾ ಯೋಜನೆಯಡಿ ರೈತರ ಜಮೀನಿನಲ್ಲಿ ಬದು ನಿರ್ಮಾಣ ಕಾಮಗಾರಿಗೆ ಶನಿವಾರ ಚಾಲನೆ ನೀಡಿ ಮಾತನಾಡಿದ ಅವರು, ಕರೊನಾದಂತಹ ಸ್ಥಿತಿಯಲ್ಲಿ ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗುವಂತೆ ಸಾಕಷ್ಟು ಯೋಜನೆಗಳನ್ನು ಸರ್ಕಾರ ರೂಪಿಸಿದೆ. ನರೆಗಾದಡಿ ದುಡಿದ ಕಾರ್ಮಿಕರಿಗೆ ಸಮರ್ಪಕ ಸಂಬಳವೂ ನೀಡಲಾಗುತ್ತಿದೆ. ಯೋಜನೆಯ ಲಾಭ ಪಡೆದುಕೊಳ್ಳಿ ಎಂದು ಕರೆ ನೀಡಿದರು.
    ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಕೆ. ಅನಿತಾ ಮಾತನಾಡಿ, ಮೇ 19ರಿಂದ ಜೂ.19ರವರೆಗೆ ಉದ್ಯೋಗ ಖಾತ್ರಿಯಡಿ ಬದು ನಿರ್ಮಾಣ ಅಭಿಯಾನ ನಡೆಯಲಿದೆ. ಸಣ್ಣ ಪ್ರಮಾಣದ ರೈತರು ತಮ್ಮ ಹೊಲಗಳಲ್ಲಿ ಬದು ನಿರ್ಮಾಣ ಮಾಡಿಕೊಳ್ಳಬಹುದು. ಆಯಾ ಗ್ರಾಪಂನಿಂದ ಇದಕ್ಕೆ ಸಹಕಾರ ಸಿಗಲಿದೆ ಎಂದರು.
    ಕಾಮಗಾರಿಯಲ್ಲಿ ತೊಡಗಿದ ಕೂಲಿಕಾರರಿಗೆ ಮಾಸ್ಕ್, ಸ್ಯಾನಿಟೈಸರ್ ಮತ್ತು ಸಾಬೂನು ಉಚಿತವಾಗಿ ನೀಡಲಾಯಿತು.
    ಗ್ರಾಪಂ ಅಧ್ಯಕ್ಷೆ ನಾಗಮ್ಮ ಕರದಾಳ, ತಾಪಂ ವ್ಯವಸ್ಥಾಪಕ ಅಮೃತ ಕ್ಷೀರಸಾಗರ್, ಪಿಡಿಒ ಸೂರ್ಯಕಾಂತ ಕೆರಳ್ಳಿ, ಮುಖಂಡ ಮೌನೇಶ ಕರದಾಳ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts