More

    ನಾಗನೂರ ಸಮಗ್ರ ಅಭಿವೃದ್ಧಿಗೆ ಒತ್ತು

    ಮೂಡಲಗಿ, ಬೆಳಗಾವಿ: ನಾಗನೂರ ಪಟ್ಟಣದ ಪ್ರಮುಖ ರಸ್ತೆಗಳ ಅಭಿವೃದ್ಧಿಗಾಗಿ ನಗರೋತ್ಥಾನ ಯೋಜನೆಯಡಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.

    ನಾಗನೂರ ಪಟ್ಟಣದ ಹೊರವಲಯದ ಮಹಾಲಿಂಗೇಶ್ವರ ದೇವಸ್ಥಾನದ ಹತ್ತಿರ 1.89 ಕೋಟಿ ರೂ. ವೆಚ್ಚದ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆ(ಹಂತ-4)ಯಡಿ ರಸ್ತೆ ಕಾಮಗಾರಿಗೆ ಶನಿವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

    ನಾಗನೂರ ಪಟ್ಟಣದ ಅಭಿವೃದ್ಧಿಗಾಗಿ ಸರ್ಕಾರದ ವಿವಿಧ ಯೋಜನೆಗಳ ಅಡಿಯಲ್ಲಿ ಸಾಕಷ್ಟು ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗಿದೆ. ರಸ್ತೆಗಳ ಸುಧಾರಣೆಗಾಗಿ ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆಯಡಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಉತ್ತಮ ಗುಣಮಟ್ಟದ ರಸ್ತೆ ಕಾಮಗಾರಿಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಪಟ್ಟಣದ ನಾಗರಿಕರ ಆಶೋತ್ತರಗಳಿಗೆ ಸ್ಪಂದಿಸುವ ಕೆಲಸ ಮಾಡುವುದಾಗಿ ಹೇಳಿದರು.

    ಆದೇಶ ಪತ್ರ ವಿತರಣೆ: ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ನಾಗನೂರ ಪಟ್ಟಣ ಪಂಚಾಯಿತಿಯಿಂದ 2021-22ನೇ ಸಾಲಿನ ವಾಜಪೇಯಿ ಹಾಗೂ ಅಂಬೇಡ್ಕರ್ ವಸತಿ ಯೋಜನೆಗಳ 46 ಫಲಾನುಭವಿಗಳಿಗೆ ಮಂಜೂರಾತಿ ಆದೇಶ ಪತ್ರ ವಿತರಿಸಿದರು. ವಾಜಪೇಯಿ ವಸತಿ ಯೋಜನೆಯಡಿ ಪ್ರತಿ ಫಲಾನುಭವಿಗೆ 2.70 ಲಕ್ಷ ರೂ. ಮತ್ತು ಅಂಬೇಡ್ಕರ್ ವಸತಿ ಯೋಜನೆಯಡಿ ಪ್ರತಿ ಫಲಾನುಭವಿಗೆ 3.30 ಲಕ್ಷ ರೂ.ನೀಡಲಾಗುತ್ತಿದೆ.

    ಘಟಪ್ರಭಾ ಜೆಜಿಕೋ ಅಧ್ಯಕ್ಷ ಬಿ.ಆರ್. ಪಾಟೀಲ(ನಾಗನೂರ), ಮಾಜಿ ಸಚಿವ ಆರ್.ಎಂ. ಪಾಟೀಲ, ಎಪಿಎಂಸಿ ಮಾಜಿ ಅಧ್ಯಕ್ಷ ಶಂಕರ ಹೊಸಮನಿ, ಎಪಿಎಂಸಿ ನಿರ್ದೇಶಕ ಕೆಂಚಪ್ಪ ಸಕ್ರೆಪ್ಪಗೋಳ, ಪ್ರಭಾಶುಗರ್ ನಿರ್ದೇಶಕ ಕೆಂಚಗೌಡ ಪಾಟೀಲ, ಮುಖಂಡರಾದ ಚಂದ್ರು ಬೆಳಗಲಿ, ಅಲ್ಲಪ್ಪ ಗುಡೆನ್ನವರ, ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕ ಮಲ್ಲು ಪಾಟೀಲ, ಅರಭಾವಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಪರಸಪ್ಪ ಬಬಲಿ, ಭೀಮಗೌಡ ಪಾಟೀಲ, ಭೀಮಪ್ಪ ಹಳಿಗೌಡರ, ಮುತ್ತೆಪ್ಪ ಖಾನಪ್ಪನವರ, ಸತ್ತೆಪ್ಪ ಕರವಾಡಿ, ಪಟ್ಟಣ ಪಂಚಾಯತ ಸದಸ್ಯರು, ಪಪಂ ಮುಖ್ಯಾಧಿಕಾರಿ ಆರ್.ಎಸ್. ರಂಗಸುಭೆ ಇತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts