ಹಾಸನ: ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಹಾಗೂ ಜಾನುವಾರುಗಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮವಹಿಸಲು ಹಾಗೂ ನಿಗದಿತ ಸಮಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆ ಹರಿಸುವಂತೆ ಜಿಲ್ಲಾಧಿಕಾರಿ ಸಿ.ಸತ್ಯಭಾಮಾ ಅವರು ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷತೆ ವಹಿಸಿ ಜಿಲ್ಲೆಯಲ್ಲಿ ಬರ ಪರಸ್ಥಿತಿ ನಿವಾರ್ಹಣೆ ಕುರಿತಂತೆ ಸಭೆ ನಡೆಸಿ ಮಾತನಾಡಿದ ಅವರು, ಕುಡಿಯುವ ನೀರಿಗೆ ಟ್ಯಾಂಕರ್ಗಳು ಜಿಪಿಎಸ್ ಅಳವಡಿಸಿ ನೀರು ಸರಬರಾಜು ಮಾಡಬೇಕು.
ಬಿಸಿಲಿನ ತಾಪಮಾನ ಹೆಚ್ಚಿರುವ ಹಿನ್ನಲೆಯಲ್ಲಿ ಸಾರ್ವಜನಿಕರು ಅರಿವು ಮೂಡಿಸುವ ಕೆಲಸವಾಗಬೇಕು ಹಾಗೂ ಪತ್ರಿಕೆಗಳನ್ನು ಹೆಚ್ಚಿನ ಪ್ರಚಾರ ವನ್ನು ನೀಡಬೇಕು ಎಂದರು.
ಜಾನುವಾರುಗಳಿಗೆ ಮೇವಿಗೆ ಹಾಗೂ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಕ್ರಮವಹಿಸಬೇಕು ಹಾಗೂ ಜಿಲ್ಲೆಯಿಂದ ಜಿಲ್ಲೆಗೆ ಯಾವುದೇ ಮೇವು ಸರಬರಾಜು ಆಗಬಾರದು. ಪಕ್ಷಿಗಳಿಗೆ ಮನೆಯ ಮೇಲೆ ಕುಡಿಯುವ ನೀರಿನ ಇಡಲು ಆಯಾ ಗ್ರಾಮ ಪಂಚಾಯಿತಿ ಗಳಲಿ ಹೆಚ್ಚಿನ ಪ್ರಚಾರ ನೀಡಬೇಕು.ಎಲ್ಲೆಲ್ಲಿ ಕುಡಿಯುವ ನೀರಿನ ತೊಡರೆಯದ ಗ್ರಾಮ ಪಂಚಾಯಿತಿ ಹಾಗೂ ನಗರ ಸಭೆಯ ಮುಖ್ಯಾಧಿಕಾರಿಗಳು ಜವಾಬ್ದಾರಿಯಾಗಿರುತ್ತದೆ ನಿರ್ಲಕ್ಷ್ಯ ತೋರಿದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಆರ್.ಪೂರ್ಣಿಮಾ ಮಾತನಾಡಿ, ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ ವಹಿಸಿ ತಾಲೂಕುಗಳಲ್ಲಿ ಮುಂದಿನ ದಿನಗಳಲ್ಲಿ ಎದುರಾಗಬಹುದಾಗ ಗ್ರಾಮಗಳನ್ನು ಗುರುತಿಸಿಕೊಂಡು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಕೆ.ಟಿ. ಶಾಂತಲಾ ಮಾತನಾಡಿ, ಯಾವುದೇ ರೀತಿಯ ಕುಡಿಯುವ ನೀರನ್ನು ಇತರೆ ಉಪಯೋಗಕ್ಕೆ ಬಳಸಿಕೊಳ್ಳುತ್ತಿದ್ದಲ್ಲಿ, ಅಂತವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳವಂತೆ ಹಾಗೂ ವಿದ್ಯುತ್ ಸಂಪರ್ಕ ಕಡಿತಗೊಳಿಸಿ ಕ್ರಮ ಕೈಗೊಳ್ಳಬೇಕು ಎಂದು ಅವರು ತಿಳಿಸಿದರು.
ಸಭೆಯಲ್ಲಿ ಜಂಟಿ ಕೃಷಿ ನಿರ್ದೇಶಕ ಸುಲೋಚನಾ, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ರಮೇಶ್ ಮತ್ತಿತರರು ಇದ್ದರು.