ಬಾಗಲಕೋಟೆ: ಜಿಲ್ಲಾಡಳಿತ ಭವನದಲ್ಲಿರುವ ಜಿ.ಪಂ ಸಭಾಭವನದಲ್ಲಿ ಸ್ಥಾಪಿಸಲಾದ ಜಿಲ್ಲಾ ನಿಯಂತ್ರಣ ಕೋಶಕ್ಕೆ ಸಾಮಾನ್ಯ ವೀಕ್ಷಕರಾದ ಸರವನವೆಲ್ರಾಜ್ ಶನಿವಾರ ಭೇಟಿ ನೀಡಿ ಪರಿಶೀಲಿಸಿದರು.
ಜಿಲ್ಲಾ ನಿಯಂತ್ರಣ ಕೋಶಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಚೆಕ್ಪೋಸ್ಟಗಳ ಮೇಲೆ ಕಣ್ಗಾವಲು, ಸಿ-ವಿಜಿಲ್ ಆ್ಯಪ್ ಮೂಲಕ ಮತ್ತು ಸಹಾಯವಾಣಿ ಸಂಖ್ಯೆ ೧೯೫೦ಗೆ ಕರೆಗಳ ಮೂಲಕ ದೂರು ಸ್ವೀಕಾರ, ವಿದ್ಯುನ್ಮಾನ, ಮುದ್ರಣ ಮಾದ್ಯಮ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಜಾನಕಿ ಕೆ.ಎಂ ಅವರಿಂದ ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಸಿವಿಜಿಲ್ ನೋಡಲ್ ಅಧಿಕಾರಿ ಅಮರೇಶ ಎಚ್. ಆಹಾರ ಇಲಾಖೆಯ ಜಂಟಿ ನಿರ್ದೇಶಕ ಚನಬಸಪ್ಪ ಕೊಡ್ಲಿ, ಜಿಲ್ಲಾ ವಾರ್ತಾಧಿಕಾರಿ ಅಮರೇಶ ದೊಡಮನಿ ಸೇರಿದಂತೆ ಇತರರು ಇದ್ದರು.