More

    ನಿರಂತರ ಮಳೆಗೆ ಜನಜೀವನ ಅಸ್ತವ್ಯಸ್ತ

    ರಾಯಚೂರು: ಜಿಲ್ಲೆಯಾದ್ಯಂತ ಎಡೆಬಿಡದೆ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಳ್ಳುವಂತಾಗಿದ್ದು, ರಸ್ತೆಗಳು ಸಂಪೂರ್ಣ ಕೆಸರುಮಯವಾಗಿ ಸಂಚಾರಕ್ಕೆ ಜನರು ತಾಪತ್ರಯ ಪಡುವಂತಾಗಿದೆ.
    ಕಳೆದ ಎರಡ್ಮೂರು ದಿನಗಳಿಂದ ಜಿಟಿಜಿಟಿ ಮಳೆ ಸುರಿಯುತ್ತಿದ್ದರೂ, ನಡುವೆ ಮಳೆಗೆ ಬಿಡುವು ಇರುತ್ತಿತ್ತು. ಆದರೆ ಬುಧವಾರ ರಾತ್ರಿಯಿಂದ ಆರಂಭವಾದ ಮಳೆ ಗುರುವಾರ ರಾತ್ರಿಯವರೆಗೆ ನಿರಂತರವಾಗಿ ಸುರಿಯುತ್ತಿರುವುದರಿಂದ ಕೆಲಸ ಕಾರ್ಯಗಳಿಗಾಗಿ ಓಡಾಡುವವರಿಗೆ ಸಮಸ್ಯೆಯಾಗಿದೆ.
    ಮಣ್ಣಿನ ರಸ್ತೆಗಳು ಕೆಸರು ಗದ್ದೆಯಂತಾಗಿದ್ದು, ನಗರದ ಮುಖ್ಯ ರಸ್ತೆಗಳಲ್ಲಿನ ಚರಂಡಿಗಳು ತುಂಬಿ ರಸ್ತೆಗೆ ನೀರು ಹರಿಯುತ್ತಿರುವುದರಿಂದ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ವ್ಯಾಪಾರಸ್ಥರು ಮಳೆಯಿಂದಾಗಿ ಜನರು ಬಾರದೆ ವಹಿವಾಟು ಕುಂಠಿತಗೊಂಡು ಸಂಕಷ್ಟ ಎದುರಿಸುವಂತಾಗಿದೆ.
    ಗ್ರಾಮಾಂತರದ ಪ್ರದೇಶದಲ್ಲಿನ ಮಣ್ಣಿನ ಮನೆಗಳಲ್ಲಿನ ಜನರಿಗೆ ನಿರಂತರ ಮಳೆಯಿಂದ ಗೋಡೆಗಳು ಬೀಳುವ ಆತಂಕ ಎದುರಾಗಿದ್ದರೆ, ತಗ್ಗು ಪ್ರದೇಶದಲ್ಲಿನ ಮನೆಗಳಿಗೆ ನೀರು ನುಗ್ಗಿ ಜನರು ರಾತ್ರಿಯಿಡಿ ಜಾಗರಣೆ ಮಾಡುವಂತಾಗಿದೆ. ಜತೆಗೆ ನಿರಂತರ ವಿದ್ಯುತ್ ಕಡಿತದಿಂದ ಜನರು ಸಮಸ್ಯೆ ಎದುರಿಸುವಂತಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts