ದಾವಣಗೆರೆ : ಹರಿಹರ ತಾಲೂಕಿನ ಭಾನುವಳ್ಳಿ ಹಾಗೂ ಕಡ್ಲೆಗೊಂದಿ ಗ್ರಾಮಗಳ ದಲಿತ ಹಾಗೂ ಹಿಂದುಳಿದ ಸಮುದಾಯಗಳಿಗೆ ನಿವೇಶನ ಹಾಗೂ ವಸತಿ ಸೌಲಭ್ಯ ಕಲ್ಪಿಸಲು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಹರಿಹರದಲ್ಲಿ ಜ.5ರಂದು ತಮಟೆ ಚಳವಳಿ ನಡೆಸಲಾಗುವುದು ಎಂದು ಗ್ರಾಮಸ್ಥರು ಹೇಳಿದರು.
ಶುಕ್ರವಾರ ಬೆಳಗ್ಗೆ 11 ಗಂಟೆಗೆ ಹರಿಹರದ ಪಕ್ಕೀರಸ್ವಾಮಿ ಮಠದಿಂದ ತಾಲೂಕು ಕಚೇರಿವರೆಗೆ ತಮಟೆ ಚಳವಳಿ ನಡೆಸಿ ತಾಲೂಕು ಮತ್ತು ಜಿಲ್ಲಾಡಳಿತದ ಗಮನ ಸೆಳೆಯಲಾಗುವುದು ಎಂದು ಭಾನುವಳ್ಳಿಯ ಲಕ್ಷ್ಮಪ್ಪ ಹಾಗೂ ಸಾಕಮ್ಮ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.