ಉಪ್ಪಿನಬೆಟಗೇರಿ: ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಕಲ್ಯಾಣಿ ನಾಗಪ್ಪ ನುಗ್ಗಾನಟ್ಟಿ (32) ಆತ್ಮಹತ್ಯೆ ಮಾಡಿಕೊಂಡ ರೈತ. ಕೃಷಿಗೆ ಸಂಬಂಧಿಸಿದಂತೆ ವಿವಿಧ ಬ್ಯಾಂಕ್ಗಳಲ್ಲಿ ಸಾಲ ಮಾಡಿಕೊಂಡಿದ್ದನೆಂದು ತಿಳಿದು ಬಂದಿದೆ. ಸಾಲದ ಮೊತ್ತ ಎಷ್ಟು ಎಂಬ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ. ಸ್ಥಳಕ್ಕೆ ಗರಗ ಠಾಣೆ ಪಿಎಸ್ಐ ಪ್ರಸಾದ ಪೆಣೆಕರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರೈತ ಆತ್ಮಹತ್ಯೆ ಎಂಬ ಪ್ರಕರಣ ದಾಖಲಿಸಿಕೊಂಡಿರುವುದಾಗಿ ಪಿಎಸ್ಐ ತಿಳಿಸಿದ್ದಾರೆ.