ಹನಗೋಡು: ಸಮೀಪದ ನೇರಳಕುಪ್ಪೆ ಸರ್ಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು.
ಶಾಲಾ ವಿದ್ಯಾರ್ಥಿ ಸಂಘದ ನಾಯಕಿ ಲಕ್ಷ್ಮೀ ಮಾತನಾಡಿ, ದಿ.ಪಂಡಿತ್ ಜವಾಹರಲಾಲ್ ನೆಹರು ಸ್ವತಂತ್ರ ಭಾರತದ ಪ್ರಥಮ ಪ್ರಧಾನಿಯಾಗಿ ದೇಶದ ಏಳಿಗೆಗೆ ಪಂಚವಾರ್ಷಿಕ ಯೋಜನೆ ಸೇರಿದಂತೆ ಕೃಷಿ, ಕೈಗಾರಿಕೆ, ನೀರಾವರಿ ಶಿಕ್ಷಣ, ಆರೋಗ್ಯ ಸೇರಿದಂತೆ ಹಲವು ಮಹತ್ವದ ಯೋಜನೆಗಳನ್ನು ಜಾರಿಗೊಳಿಸಿದ ಧೀಮಂತ ನಾಯಕ. ಅವರ ಆದರ್ಶಗಳನ್ನು ನಾವು ಜೀವನದಲ್ಲಿ ಪಾಲಿಸಬೇಕು ಎಂದು ಕರೆ ನೀಡಿದರು.