ಕೋಲಾರ: ಎಐಸಿಸಿ ಮುಖಂಡ ರಾಹುಗಾಂಧಿ ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಭಾರತ್ ಜೋಡೋ ನ್ಯಾಯ ಯಾತ್ರೆಗೆ ಅಸ್ಸಾಂ ಬಿಜೆಪಿ ಮುಖಂಡರು ಅಡ್ಡಿಪಡಿಸಿರುವುದ್ದನ್ನು ಖಂಡಿಸಿ ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಭವನದ ಎದುರು ಮಂಗಳವಾರ ಪ್ರತಿಭಟಿಸಿದರು.
ಕಾಂಗ್ರೆಸ್ ಜಿಲ್ಲಾ ಟಕದ ಅಧ್ಯಕ್ಷ ಲಕ್ಷ್ಮೀನಾರಾಯಣ ಮಾತನಾಡಿ, ದೇಶದಲ್ಲಿ ಬಿಜೆಪಿಯ ಪಾಪದ ಕೊಡ ತುಂಬಿದಿದೆ. ಇದರಿಂದಾಗಿಯೇ ರಾಹುಲ್ ಗಾಂಧಿ ಅವರು ಮಾಡುತ್ತಿರುವ ನ್ಯಾಯ ಯಾತ್ರೆಗೆ ಉದ್ದೇಶ ಪೂರ್ವಕವಾಗಿಯೇ ಅಡ್ಡಿಪಡಿಸಿದ್ದಾರೆ ಎಂದು ದೂರಿದರು.
ಕಾಶ್ಮೀರದಿಂದ ಕನ್ಯಾಕುಮಾರಿ ತನಕ ಭಾರತ್ ಜೋಡೋ ಯಾತ್ರೆಯನ್ನು ಯಶಸ್ವಿಯಾಗಿ ನಡೆದಿದ್ದು, ಇದಕ್ಕೆ ಜನತೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇದೀಗ ನ್ಯಾಯ ಯಾತ್ರೆಗೂ ಅಭೂತಪೂರ್ವ ಬೆಂಬಲ ದೊರೆತಿತ್ತು. ಇದನ್ನು ಸಹಿಸಲಾರದ ಅಸ್ಸಾಂ ಸರ್ಕಾರವು ಬಿಜೆಪಿ ಕಾರ್ಯಕರ್ತರಿಂದ ಯಾತ್ರೆಯನ್ನು ಹತ್ತಿಕ್ಕುವ ಪ್ರಯತ್ನ ಮಾಡಿದೆ ಎಂದು ಆರೋಪಿಸಿದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಜೋಡೊ ನ್ಯಾಯ ಜಾತ್ರೆ ಗುವಾಹಟಿ ನಗರಕ್ಕೆ ಪ್ರವೇಶಿಸದಂತೆ ತಡೆಯಲಾಗಿದೆ. ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಲಾಠಿ ಪ್ರಹಾರ ಮಾಡಿ ಯಾತ್ರೆಯನ್ನು ನಿಲ್ಲಿಸಲಾಗಿದೆ. ನ್ಯಾಯ ಯಾತ್ರೆಯ ದೊಡ್ಡ ಧ್ವನಿಯಿಂ ಹೆದರಿದ ಅಸ್ಸಾಂ ಸರ್ಕಾರ ಇಂತಹ ಕೃತ್ಯ ನಡೆಸಿದೆ. ಇದು ಜನರ ಧ್ವನಿ ಎಂಬುದನ್ನು ಮರೆಯಬಾರದು ಎಂದರು.
ಕಾಂಗ್ರೆಸ್ ಜಿಲ್ಲಾ ಕಾರ್ಯಾಧ್ಯಕ್ಷ ಊರುಬಾಗಿಲು ಶ್ರೀನಿವಾಸ್ ಮಾತನಾಡಿ, ಮೋದಿ ಸರ್ಕಾರದ ಜನರ ವಿಶ್ವಾಸ ಕಳೆದುಕೊಂಡಿದೆ. ಜನಪರ ಆಡಳಿತ ನೀಡುವಲ್ಲಿ ವಿಲರಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಜನರು ಕಾಂಗ್ರೆಸ್ ಮೇಲೆ ಒಲವು ತೋರುತ್ತಿದ್ದಾರೆ. ಕಾಂಗ್ರೆಸ್ಗೆ ಕೆಟ್ಟ ಹೆಸರು ತರುವ ಪ್ರಯತ್ನ ಬಿಜೆಯಿಂದ ಅಸ್ಸಾಂನಲ್ಲಿ ಪ್ರಾರಂಭವಾಗಿದೆ ಎಂದು ಟೀಕಿಸಿದರು.
5 ರಾಜ್ಯಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಎರಡು ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಉಳಿದ ರಾಜ್ಯಗಳಲ್ಲಿ ಕಾಂಗ್ರೆಸ್ ಶೇಕಡವಾರು ಮತಗಳನ್ನು ಪಡೆದುಕೊಂಡಿದೆ. ಇದರಿಂದ ದೇಶದಲ್ಲಿ ಬಿಜೆಪಿ ಯಾವ ಮಟ್ಟಕ್ಕೆ ಬಂದಿಳಿದಿದೆ ಎಂಬುದು ಮೋದಿಯವರಿಗೆ ಗೋಚರಿಸಿದೆ. ಇದರಿಂದ ಭಯಭೀತರಾಗಿರುವ ಅವರು ಬಿಜೆಪಿ ಅಧಿಕಾರದಲ್ಲಿ ಇರುವ ರಾಜ್ಯಗಳಲ್ಲಿ ನ್ಯಾಯ ಯಾತ್ರೆ ಪ್ರವೇಶಿಸದಂತೆ ಮಾಡುತ್ತಿದ್ದಾರೆ. ಇದ್ಯಾವುದನ್ನು ಕಾಂಗ್ರೆಸ್ ಹೆದರುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಕಾಂಗ್ರೆಸ್ ಮಹಿಳಾ ಟಕದ ಅಧ್ಯಕ್ಷ ರತ್ನಮ್ಮ, ಕೆಪಿಸಿಸಿ ಒಬಿಸಿ ಟಕದ ಉಪಾಧ್ಯಕ್ಷ ಮಂಜುನಾಥ್, ಎಸ್ಸಿ ಟಕದ ಮುಖಂಡ ಕೆ.ಜಯದೇಶ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್ ಬಾಬು, ಮುಖಂಡರಾದ ನಾಗರಾಜಗೌಡ, ಶ್ರೀಕೃಷ್ಣ ಮತಿತರರು ಪಾಲ್ಗೊಂಡಿದ್ದರು.