More

    ಪಕ್ಷ ಸಂಘಟನೆಗೆ ಮೊದಲ ಆದ್ಯತೆ

    ಬೆಳಗಾವಿ: ಯಾವುದೇ ಇಲಾಖೆ ಜವಾಬ್ದಾರಿ ನೀಡಿದರೂ ಸಮರ್ಥವಾಗಿ ನಿಬಾಯಿಸುತ್ತೇನೆ. ಇಲಾಖೆಯ ಅಭಿವೃದ್ಧಿ ಕಾರ್ಯಗಳ ಜತೆಗೆ ಪಕ್ಷ ಸಂಘಟನೆಗೂ ಹೆಚ್ಚಿನ ಆದ್ಯತೆ ನೀಡುತ್ತೇನೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

    ಎರಡನೇ ಬಾರಿ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಬೆಳಗಾವಿ ನಗರಕ್ಕೆ ಶುಕ್ರವಾರ ಆಗಮಿಸಿದ್ದ ಅವರು ಮಾತನಾಡಿ, ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಶ್ವಾಸವಿಟ್ಟು ಎರಡನೇ ಸಲ ನನಗೆ ಸಚಿವ ಸ್ಥಾನ ನೀಡಿದ್ದಾರೆ. ಅವರ ಆಶಯದಂತೆ ಸಮರ್ಪಕವಾಗಿ ಖಾತೆಯ ಜವಾಬ್ದಾರಿ ನಿಭಾಯಿಸಿ ಎಲ್ಲರ ವಿಶ್ವಾಸ ಉಳಿಸಿಕೊಳ್ಳುತ್ತೇನೆ ಎಂದರು.

    ನೆರೆಯ ಮಹಾರಾಷ್ಟ್ರದಲ್ಲಿ ಕರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಚೆಕ್‌ಪೋಸ್ಟ್‌ಗಳಲ್ಲಿ ಕಟ್ಟುನಿಟ್ಟಿನ ಕ್ರಮ ವಹಿಸಲಾಗಿದೆ. ಅಲ್ಲದೆ, ಆ. 7ರಿಂದ ಎರಡು ದಿನಗಳ ಕಾಲ ವಿಜಯಪುರ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವೆ ಎಂದು ಜೊಲ್ಲೆ ತಿಳಿಸಿದರು. ಸಂಸದ ಅಣ್ಣಾಸಾಹೇಬ ಜೊಲ್ಲೆ, ಮುರುೇಂದ್ರಗೌಡ ಪಾಟೀಲ, ದಾದಾಗೌಡ ಬಿರಾದಾರ, ವಿಜಯಾ ಹಿರೇಮಠ, ವಿಕ್ರಂ ಪುರೋಹಿತ ಇತರರು ಇದ್ದರು. ಇದಕ್ಕೂ ಮೊದಲು ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳು ಸಚಿವೆ ಶಶಿಕಲಾ ಜೊಲ್ಲೆ ಅವರನ್ನು ಅದ್ದೂರಿಯಾಗಿ ಸ್ವಾಗತಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts