More

    ಪತ್ನಿ ಸಮೇತ ಚಾಮುಂಡೇಶ್ವರಿ ದರ್ಶನ ಪಡೆದ ಸಿಎಂ


    ಮೈಸೂರು: ನಾಡದೇವತೆ ಚಾಮುಂಡೇಶ್ವರಿಯ ವರ್ಧಂತಿ ಮಹೋತ್ಸವದ ಅಂಗವಾಗಿ ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪತ್ನಿ ಸಮೇತ ಚಾಮುಂಡೇಶ್ವರಿ ದರ್ಶನ ಪಡೆದರು.


    ಮುಖ್ಯಮಂತ್ರಿಗಳಿಗೆ ಸಚಿವರಾದ ಗೋವಿಂದ ಕಾರಜೋಳ, ಎಸ್.ಟಿ. ಸೋಮಶೇಖರ್, ಶಾಸಕರಾದ ಜಿ.ಟಿ. ದೇವೇಗೌಡ, ಎಸ್.ಎ. ರಾಮದಾಸ್, ನಿರಂಜನಕುಮಾರ್, ಮಾಜಿ ಸಚಿವ ಟಿ.ಬಿ. ಜಯಚಂದ್ರ, ಕೌಟಿಲ್ಯ ರಘು ಸಾಥ್ ನೀಡಿದರು. ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಇದ್ದರು.


    ಬಳಿಕ ಮಾತನಾಡಿದ ಸಿಎಂ, ತಾಯಿ ಚಾಮುಂಡೇಶ್ವರಿ ವರ್ಧಂತ್ಯುತ್ಸವದ ಹಿನ್ನೆಲೆಯಲ್ಲಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದೇನೆ. ನಾಡು ಸುಭಿಕ್ಷವಾಗಿ, ಜನರು ನೆಮ್ಮದಿಯಿಂದ ಇರುವಂತೆ ಪ್ರಾರ್ಥಿಸಿದ್ದೇನೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts