More

    ಪತ್ನಿ ಹಂತಕನಿಗೆ 6 ವರ್ಷ ಜೈಲು  -ಚಿಕನ್ ಮಾಡಿಕೊಡದ್ದಕ್ಕೆ ಕೃತ್ಯ

    ದಾವಣಗೆರೆ: ಪತ್ನಿಯನ್ನು ಹತ್ಯೆ ಮಾಡಿದ್ದ ಅಪರಾಧಿಗೆ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಸೋಮವಾರ, ಆರು ವರ್ಷಗಳ ಕಾರಾಗೃಹ ಸಜೆ ಹಾಗೂ 10 ಸಾವಿರ ರೂ. ದಂಡ ವಿಧಿಸಿದೆ.
    ಬನ್ನಿಕೋಡು ಗ್ರಾಮದ ಮಾಗನಹಳ್ಳ ಕೆಂಚಪ್ಪ ಶಿಕ್ಷೆಗೆ ಗುರಿಯಾದ ಅಪರಾಧಿ. ಹರಿಹರ ತಾಲೂಕಿನ ವಾಸನ ಗ್ರಾಮ ಮೂಲದ ಶೀಲಾ ಅವರನ್ನು ಕೆಂಚಪ್ಪ ಮದುವೆಯಾಗಿದ್ದ.
    2022ರ ಜೂನ್ 8ರಂದು ಸಂಜೆ ಪಾನಮತ್ತನಾಗಿ ಮನೆಗೆ ಬಂದ ಕೆಂಚಪ್ಪ, ಊಟಕ್ಕೆ ಚಿಕನ್ ಮಾಡಿಕೊಡಲಿಲ್ಲ ಎಂಬ ಕಾರಣಕ್ಕೆ ಜಗಳ ತೆಗೆದಿದ್ದಲ್ಲದೆ ಪತ್ನಿಯ ಎಡಭುಜಕ್ಕೆ ಚಾಕುವಿನಿಂದ ಚುಚ್ಚಿ ಗಾಯಗೊಳಿಸಿ ಕೊಲೆ ಮಾಡಿದ್ದ.
    ಹರಿಹರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹರಿಹರ ಸಿಪಿಐ ಯು. ಸತೀಶ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
    ನ್ಯಾಯಾಧೀಶ ಜೆ.ವಿ. ವಿಜಯಾನಂದ ಅವರು ಅಪರಾಧಿಗೆ ಶಿಕ್ಷೆ ಪ್ರಕಟಿಸಿದರು. ಸರ್ಕಾರದ ಪರವಾಗಿ ವಕೀಲ ಸತೀಶ ಕುಮಾರ್ ವಕಾಲತ್ತು ವಹಿಸಿದ್ದರು.
    —-

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts