More

    ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ವೇಣು ಕುಮಾರ್ ಅಧಿಕಾರ ಸ್ವೀಕಾರ

    ಹಾಸನ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಎರಡನೇ ಅವಧಿಗೆ ಅಧ್ಯಕ್ಷರಾಗಿ ಕೆ.ಎಚ್. ವೇಣುಕುಮಾರ್ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು.
    ನಗರದ ಪತ್ರಕರ್ತರ ಭವನದಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಬಾಳ್ಳು ಗೋಪಾಲ್ ಅವರು ಎರಡು ವರ್ಷ ಸಂಘದ ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸಿದ್ದರು. ಈ ಹಿಂದಿನ ಒಪ್ಪಂದದಂತೆ ವೇಣು ಕುಮಾರ್ ಅವರಿಗೆ 2ನೇ ಅವಧಿಗೆ ಅಧ್ಯಕ್ಷ ಸ್ಥಾನವನ್ನು ಬಿಟ್ಟುಕೊಟ್ಟರು.
    ಈ ಸಂದರ್ಭದಲ್ಲಿ ಮಾತನಾಡಿದ ನಿರ್ಗಮಿತ ಅಧ್ಯಕ್ಷ ಬಾಳ್ಳು ಗೋಪಾಲ್, ಎರಡು ವರ್ಷಗಳ ಕಾಲ ಪತ್ರಕರ್ತರ ಸಂಘದಲ್ಲಿ ಉತ್ತಮವಾಗಿ ಕೆಲಸ ಮಾಡಲು ಸಹಕರಿಸಿದಂತಹ ಎಲ್ಲ ಸದಸ್ಯರು ಪದಾಧಿಕಾರಿಗಳಿಗೆ ನಾನು ತುಂಬು ಹೃದಯದ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು.
    ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ವೇಣು ಕುಮಾರ್ ಮಾತನಾಡಿ, ಜಿಲ್ಲಾ ಸಂಘ ರಾಜ್ಯದಲ್ಲಿ ಮಾದರಿಯಾಗಿದ್ದು, ಎಲ್ಲ ಹಿರಿಯರು ಮತ್ತು ಕಿರಿಯರ ಮಾರ್ಗದರ್ಶನದಲ್ಲಿ ಸಂಘವನ್ನು ಸಂಘನಾತ್ಮಕವಾಗಿ ಮುನ್ನಡೆಸಿಕೊಂಡು ಹೋಗಲಾಗುವುದು. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುವುದಾಗಿ ಭರವಸೆ ನೀಡಿದರು.
    ರಾಜ್ಯ ಕಾರ್ಯನಿರ್ತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಎಚ್.ಬಿ. ಮದನ್‌ಗೌಡ ಮಾತನಾಡಿ, ಬಾಳ್ಳು ಗೋಪಾಲ್ ಅವರು ಎರಡು ವರ್ಷಗಳ ಕಾಲ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಕೊಟ್ಟ ಮಾತಿನಂತೆ ಈಗ ಅಧಿಕಾರ ಹಸ್ತಾಂತರಿಸಿದ್ದಾರೆ. ಅವರಿಗೆ ತುಂಬು ಹೃದಯದ ಅಭಿನಂದನೆಗಳು ಮತ್ತು ನೂತನವಾಗಿ ಆಯ್ಕೆಯಾಗಿರುವ ವೇಣು ಕುಮಾರ್ ಅವರು ಸಂಘದಲ್ಲಿ ವಿನೂತನ ಕಾರ್ಯಕ್ರಮಗಳನ್ನ ಮಾಡುವ ಮೂಲಕ ತಮ್ಮ ಸಂಘದ ಹೇಳಿಕೆಗೆ ಶ್ರಮಿಸಬೇಕು ಎಂದು ಕಿವಿಮಾತು ಹೇಳಿದರು.
    ನೂತನವಾಗಿ ಆಯ್ಕೆಯಾದಂತಹ ಅಧ್ಯಕ್ಷರಿಗೆ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಅಭಿನಂದಿಸಿದರು. ಮತ್ತು ನಿರ್ಗಮಿತ ಅಧ್ಯಕ್ಷರಿಗೆ ಗೌರವಿಸಿ ಸನ್ಮಾನಿಸಲಾಯಿತು.
    ಈ ಸಂದರ್ಭದಲ್ಲಿ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ವಿಶೇಷ ಆಹ್ವಾನಿತ ಸದಸ್ಯ ರವಿ ನಾಕಲಗೂಡು, ಸಂಘದ ಪದಾಧಿಕಾರಿಗಳಾದ ಮೋಹನ್ ಕುಮಾರ್, ನಟರಾಜ್, ಕುಮಾರ್, ಜಿ.ಪ್ರಕಾಶ್ ಸೇರಿದಂತೆ ಸಂಘದ ಮಾಜಿ ಅಧ್ಯಕ್ಷರು, ಹಿರಿಯ ಸಂಪಾದಕರು ಹಾಗೂ ಸದಸ್ಯರು ಹಾಜರಿದ್ದರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts