More

    ಪಶು ಆಸ್ಪತ್ರೆ ನಿರ್ವಿುಸಿ ಕೊಡಿ

    ಹಾವೇರಿ: ರಾಜ್ಯದಲ್ಲಿಯೇ ಹಾವೇರಿ ಜಾನುವಾರು ಮಾರುಕಟ್ಟೆ ಪ್ರಸಿದ್ಧವಾಗಿದ್ದು, ಇಲ್ಲಿ ಪಶು ಆಸ್ಪತ್ರೆ, ಮೇವು ಹಾಗೂ ಕುಡಿಯುವ ನೀರಿನ ತೊಟ್ಟಿ ನಿರ್ವಿುಸಿ ಅನುಕೂಲ ಕಲ್ಪಿಸಬೇಕು ಎಂದು ಎಪಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನ ಹಾವೇರಿ, ಸದಸ್ಯ ರುದ್ರೇಶ ಚಿನ್ನಣ್ಣನವರ ಅವರು ಸಚಿವ ಪ್ರಭು ಚವ್ಹಾಣ ಅವರಿಗೆ ಮನವಿ ಮಾಡಿದರು.

    ನಗರದ ಹಾನಗಲ್ಲ ರಸ್ತೆಯಲ್ಲಿರುವ ಜಾನುವಾರು ಮಾರುಕಟ್ಟೆಗೆ ಗುರುವಾರ ಭೇಟಿ ನೀಡಿದ್ದ ಸಚಿವರನ್ನು ಎಪಿಎಂಸಿ ವತಿಯಿಂದ ಸನ್ಮಾನಿಸಿ, ಮಾರುಕಟ್ಟೆಯಲ್ಲಿನ ಸಮಸ್ಯೆಗಳ ಕುರಿತು ವಿವರಿಸಲಾಯಿತು. ಮಾರುಕಟ್ಟೆಯಲ್ಲಿ ಸ್ಥಳ ಅಭಾವದಿಂದಾಗಿ ರಸ್ತೆಯಲ್ಲಿಯೇ ಜಾನುವಾರು ಮಾರಾಟ ನಡೆಯುತ್ತಿದೆ. ಇದನ್ನು ತಪ್ಪಿಸಲು ನಗರದ ಹೊರವಲಯದಲ್ಲಿ 50 ಎಕರೆ ಜಾಗ ಕೊಡಿಸಿದರೆ ಜಾನುವಾರುಗಳ ಮಾರಾಟಕ್ಕೆ ವ್ಯವಸ್ಥೆ ಕಲ್ಪಿಸಬಹುದಾಗಿದೆ. ಜಾನುವಾರುಗಳಿಗೆ ಮಾರುಕಟ್ಟೆಯಲ್ಲಿ ಲಸಿಕೆ ಹಾಕಿಸುವ ವ್ಯವಸ್ಥೆ ರೂಪಿಸಬೇಕು. ಈಗಾಗಲೇ ಜಾನುವಾರುಗಳ ಶೆಡ್ ನಿರ್ಮಾಣ ಸೇರಿ ವಿವಿಧ ಕಾಮಗಾರಿಗಳಿಗೆ ಕ್ರಿಯಾಯೋಜನೆ ಸಿದ್ಧಪಡಿಸಿದ್ದು, ಕೇಂದ್ರ ಕಚೇರಿಯಿಂದ ಅನುಮೋದನೆ ದೊರಕಿಸಿಕೊಡಬೇಕು ಎಂದು ಮನವಿ ಮಾಡಿದರು.

    ಪ್ರತಿಕ್ರಿಯಿಸಿದ ಸಚಿವರು, ಕೂಡಲೆ ಅಧಿಕಾರಿಗಳೊಂದಿಗೆ ರ್ಚಚಿಸಿ ಬೇಡಿಕೆ ಈಡೇರಿಸಲಾಗುವುದು. ಎಪಿಎಂಸಿ ಸಚಿವರಿಂದ ಆಗುವ ಕೆಲಸಗಳನ್ನು ಅವರ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು.

    ಎಪಿಎಂಸಿ ಕಾರ್ಯದರ್ಶಿ ಪರಮೇಶ್ವರ ನಾಯ್ಕ, ಉಪಕಾರ್ಯದರ್ಶಿ ನಾಗರಾಜ ಪೋಟೇರ, ಮುತ್ತುರಾಜ ಅಕ್ಕಿ, ಪ್ರಭು ಹಿಟ್ನಳ್ಳಿ, ಬಸವರಾಜ ನಾಗಮ್ಮನವರ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts