More

    ಪೂಜಾ ಕಾಲನಿಯಲ್ಲಿ ರಾಜಕೀಯ ಪಕ್ಷದವರಿಗೆ ಪ್ರವೇಶವಿಲ್ಲ

    ಮತದಾನ ಬಹಿಷ್ಕಾರ ಎಂದು ಬ್ಯಾನರ್ ಹಾಕಿದ ನಿವಾಸಿಗಳು

    ಕಲಬುರಗಿ: ನಗರದ ಕುಸನೂರ ರಸ್ತೆಯಲ್ಲಿರುವ ಪೂಜಾ ಕಾಲನಿಯಲ್ಲಿನ ರಸ್ತೆ ದುರಸ್ತಿ ಸೇರಿ ಮೂಲ ಸೌಕರ್ಯ ಕಲ್ಪಿಸದ ಜನಪ್ರತಿನಿಧಿಗಳ ನಿರ್ಲಕ್ಷೃದಿಂದ ಬೇಸತ್ತಿರುವ ಬಡಾವಣೆಯ ನಿವಾಸಿಗಳು ವಿಧಾನಸಭಾ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸಲು ನಿರ್ಧರಿಸಿದ್ದು, ಈ ಬಗ್ಗೆ ಎಂದು ಬ್ಯಾನರ್ ಹಾಕಿದ್ದಾರೆ. ಅಲ್ಲದೆ ರಾಜಕೀಯ ಪಕ್ಷಗಳ ಮುಖಂಡರಿಗೆ ಪ್ರವೇಶವೂ ಇಲ್ಲ ಎಂದು ಉಲ್ಲೇಖಿಸಿದ್ದು ಗಮನಾರ್ಹವಾಗಿದೆ.

    ರಸ್ತೆ, ಒಳ ಚರಂಡಿ, ನೈರ್ಮಲ್ಯತೆ, ಶುದ್ಧ ನೀರು ಸರಬರಾಜು ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಎರಡು ವರ್ಷಗಳಿಂದ ನಿರಂತರ ಶಾಸಕರಿಗೆ ಮನವಿ ಸಲ್ಲಿಸಿದ್ದರು ಸ್ಪಂದಿಸಲ್ಲ. ಅಲ್ಲದೆ ಮಹಾನಗರ ಪಾಲಿಕೆ ಅಧಿಕಾರಿಗಳು ನಿರ್ಲಕ್ಷೃ ಮಾಡುತ್ತಿದ್ದಾರೆ. ಹೀಗಾಗಿ ಮತದಾನದಿಂದ ದೂರ ಉಳಿಯುವ ನಿರ್ಧಾರ ಮಾಡಿ ಬ್ಯಾನರ್ ಕಟ್ಟಿದ್ದೇವೆ ಎಂದು ಕಾಲನಿ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎ.ಎಲ್.ಉಪಳಾಂವಕರ ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts