More

    ಪೊಲೀಸರ ಅತಿಥಿಯಾದ ಸುಪಾರಿ ಕಿಲ್ಲರ್

    ಹುಬ್ಬಳ್ಳಿ: ಕಲಬುರಗಿಯಲ್ಲಿ ಕೊಲೆ ಸೇರಿ ಬೇರೆ ಬೇರೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಸುಪಾರಿ ಕಿಲ್ಲರ್ ಇದೀಗ ನಗರದಲ್ಲಿ ಪೊಲೀಸರ ಅತಿಥಿಯಾಗಿದ್ದಾನೆ.

    ಸಲೀಂ ಬಳ್ಳಾರಿ ಎಂಬಾತ ಹಳೇಹುಬ್ಬಳ್ಳಿ ನೇಕಾರನಗರದ ಸಾರ್ವಜನಿಕ ಸ್ಥಳದಲ್ಲಿ ಉಗುಳಿದ್ದಕ್ಕಾಗಿ ಪೊಲೀಸರ ಬಲೆಗೆ ಬಿದ್ದಿದ್ದಾನೆ.

    ಈತ ಕಲಬುರಗಿಯಲ್ಲಿ ನಡೆದ ಕೊಲೆ ಪ್ರಕರಣದ ಪ್ರಮುಖ ಆರೋಪಿ. ಈತನ ಮೇಲೆ ಹಲವು ಪ್ರಕರಣಗಳಿವೆ. ಅವೆಲ್ಲವನ್ನೂ ಮರೆಮಾಚಿ ಈತ ನೇಕಾರ ನಗರದಲ್ಲಿ ಮನೆ ಮಾಡಿಕೊಂಡು ವಾಸವಾಗಿದ್ದ ಎನ್ನಲಾಗಿದೆ.

    ಶುಕ್ರವಾರ ರಾತ್ರಿ ಮದ್ಯ ಸೇವಿಸಿ ಹೋಟೆಲ್​ವೊಂದಕ್ಕೆ ತೆರಳಿದ್ದ. ಅಲ್ಲಿ ಲಾಕ್​ಡೌನ್ ಹಿನ್ನೆಲೆಯಲ್ಲಿ ಹೋಟೆಲ್ ಮಾಲೀಕರು ಆತನಿಗೆ ಊಟ ಕೊಡಲು ನಿರಾಕರಿಸಿದ್ದರು. ಇದೇ ಕಾರಣಕ್ಕೆ ಕ್ರುದ್ಧನಾದ ಆತ ಹೋಟೆಲ್ ಬಳಿ ಎಂಜಲು ಉಗುಳಿದ್ದ. ಈ ಬಗ್ಗೆ ಸ್ಥಳೀಯರು ದೂರು ನೀಡಿದ ಹಿನ್ನೆಲೆಯಲ್ಲಿ ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರಿಗೆ ಆತ ಸಲೀಂ ಬಳ್ಳಾರಿ ಎಂಬುದು ಗೊತ್ತಾಗಿದೆ. ಆತನನ್ನು ವಶಕ್ಕೆ ಪಡೆದ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

    ಸ್ಥಳೀಯರ ದೂರಿನನ್ವಯ ಸಲೀಂ ಬಳ್ಳಾರಿಯನ್ನು ವಶಕ್ಕೆ ಪಡೆಯಲಾಗಿದೆ. ಆತ ಅಪರಾಧ ಹಿನ್ನೆಲೆಯುಳ್ಳವನಾಗಿದ್ದರಿಂದ ಹೆಚ್ಚಿನ ತನಿಖೆ ಕೈಗೊಳ್ಳಬೇಕಾಗಿದೆ. ಕಿಮ್ಸ್​ನಲ್ಲಿ ಆರೋಪಿಯ ಕೋವಿಡ್ ಪರೀಕ್ಷೆ ನಡೆಸಿದ್ದು, ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಕಸಬಾ ಠಾಣೆ ಇನ್​ಸ್ಪೆಕ್ಟರ್ ಸಜ್ಜನರ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts