More

    ಪ್ರತಿಭಟನೆ ಕೈಬಿಟ್ಟ ಶಿಕ್ಷಕರು

    ಧಾರವಾಡ: ಶಿಕ್ಷಕರು ಹಾಗೂ ಶಿಕ್ಷಣ ರಂಗದ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಮುಕ್ತ ಮನಸ್ಸು ಹೊಂದಿದೆ. 3 ತಿಂಗಳ ಅವಧಿಯಲ್ಲಿ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಶಿಕ್ಷಕರ ಸಂಘಟನೆಗಳು ನಡೆಸುತ್ತಿರುವ ಹೋರಾಟ ಕೈಬಿಡಬೇಕು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಸಿ.ಸಿ. ಪಾಟೀಲ ಹೇಳಿದರು.

    ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ 13 ದಿನಗಳಿಂದ ಎಂಎಲ್​ಸಿ ಬಸವರಾಜ ಹೊರಟ್ಟಿ ಅವರ ನೇತೃತ್ವದಲ್ಲಿ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ ಹಾಗೂ ರಾಜ್ಯದ ವಿವಿಧ ಶಿಕ್ಷಕ ಸಂಘಟನೆಗಳು ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಸರ್ಕಾರದ ಪರವಾಗಿ ಗುರುವಾರ ಭೇಟಿ ನೀಡಿ ಅವರು ಮಾತನಾಡಿದರು.

    ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶಕುಮಾರ ನೀಡಿರುವ ಪತ್ರವನ್ನು ಹಸ್ತಾಂತರಿಸಿ, ಸರ್ಕಾರಿ ಶಾಲೆಗಳ ಶಿಕ್ಷಕರಿಗೆ ಇರುವ ಜ್ಯೋತಿ ಸಂಜೀವಿನಿ ಯೋಜನೆಯನ್ನು ಅನುದಾನಿತ ಶಾಲೆಗಳ ಶಿಕ್ಷಕರಿಗೂ ವಿಸ್ತರಿಸುವುದು, ಕಾಲ್ಪನಿಕ ವೇತನ ಅನುಷ್ಠಾನದಿಂದ ಆಗುವ ಆರ್ಥಿಕ ಪರಿಣಾಮಗಳನ್ನು ಕೂಲಂಕಷವಾಗಿ ಪರಿಶೀಲಿಸಿ ವರದಿ ತಯಾರಿಸುವುದು, ಅನುದಾನ ರಹಿತ ಖಾಸಗಿ ಶಾಲೆಗಳ ಶಿಕ್ಷಕರು ಮತ್ತು ಸಿಬ್ಬಂದಿಯ ಸೇವಾ ಭದ್ರತೆಗೆ ಕಠಿಣ ಸುತ್ತೋಲೆಯೊಂದಿಗೆ ವಿಚಕ್ಷಣಾ ವ್ಯವಸ್ಥೆ ಮತ್ತಿತರ ಕ್ರಮಗಳ ಬಗ್ಗೆ ಸರ್ಕಾರ ಸ್ಪಂದಿಸಲಿದೆ ಎಂದು ಭರವಸೆ ನೀಡಿದರು.

    ಸಚಿವರು ಬಂದು ಮಾತನಾಡಿರುವುದು ಸಮಾಧಾನ ತಂದಿದೆ ಎಂದು ತಿಳಿಸಿದ ಸಂಘಟನೆಗಳ ಮುಖಂಡರು, ಸತ್ಯಾಗ್ರಹವನ್ನು ಸದ್ಯ ಮೊಟಕುಗೊಳಿಸುವುದಾಗಿ ಪ್ರಕಟಿಸಿದರು.

    ಜಿಲ್ಲಾಧಿಕಾರಿ ನಿತೇಶ ಪಾಟೀಲ, ಶಿಕ್ಷಕರ ಸಂಘಟನೆಗಳ ಪದಾಧಿಕಾರಿಗಳು, ಪ್ರತಿನಿಧಿಗಳು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts