ಮೂಡಲಗಿ: ಪಟ್ಟಣದ ಬಸವ ಮಂಟಪದಲ್ಲಿ ಮಂಗಳವಾರ ಜರುಗಿದ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ತಾಲೂಕು ಮಟ್ಟದ ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ ಪರೀೆಯಲ್ಲಿ 625 ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಕೌಜಲಗಿಯ ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ಮಹಾಲಕ್ಷಿ$್ಮ ಪ್ರದಿಪಕುಮಾರ ತಳವಾರ ಅವರಿಗೆ ಸ್ವಾತಂತ್ರ್ಯ ಹೋರಾಟಗಾರ ದಿ. ರಾವಜೇಪ್ಪ ಬಾಲಪ್ಪ ಸೋನವಾಲಕರ ಸ್ಮರಣಾರ್ಥ ಅವರ ಮೊಮ್ಮಗ ಡಾ.ಪ್ರದಿಪ ಸುಭಾಸ ಸೋನವಾಲಕರ ನೀಡುವ 1 ಲಕ್ಷ ರೂ.ಬಹುಮಾನ ವಿತರಿಸಿ ಸನ್ಮಾನಿಸಲಾಯಿತು.
ವಿದ್ಯಾರ್ಥಿನಿಯ ಸಾಧನೆಯು ಮೂಡಲಗಿ ಶೈಕ್ಷಣಿಕ ವಲಯದಲ್ಲಿಯೇ ದಾಖಲೆಯಾಗಿದೆ. ಇಂತಹ ಪ್ರತಿಭೆಗಳು ನಮ್ಮಲ್ಲಿ ಇನ್ನೂ ಹೆಚ್ಚಾಗಲಿ ಎಂಬ ಉದ್ದೇಶದಿಂದ 1 ಲಕ್ಷ ರೂ. ಬಹುಮಾನ, ಸ್ಮರಣಿಕೆ ನೀಡಿ ಸನ್ಮಾನಿಸಲಾಗಿದೆ ಎಂದು ಪ್ರತಿಷ್ಠಾನದ ಸುಭಾಸ ಸೋನವಾಲಕರ ಅಭಿಪ್ರಾಯ ವ್ಯಕ್ತಪಡಿಸಿದರು.
ಯುವ ಧುರಿಣ ಸವೋರ್ತ್ತಮ ಜಾರಕಿಹೊಳಿ, ಶಾಸಕರ ಆಪ್ತ ಕಾರ್ಯದರ್ಶಿ ನಾಗಪ್ಪ ಶೇಖರಗೋಳ, ಪುರಸಭೆ ಅಧ್ಯಕ್ಷ ಹನುಮಂತ ಗುಡ್ಲಮನಿ, ಉಪಾಧ್ಯೆ ರೇಣುಕಾ ಹಾದಿಮನಿ, ತಹಸೀಲ್ದಾರ್ ಡಿ.ಜಿ.ಮಹಾಂತ, ತಾಪಂ ಇಒ ಎಫ್.ಜಿ.ಚಿನ್ನನ್ನವರ, ಬಿಇಒ ಅಜಿತ ಮನ್ನಿಕೇರಿ, ಸಿಡಿಪಿಒ ಯಲ್ಲಪ್ಪ ಗದಾಡಿ, ಪಿ.ಎಸ್.ಐ ಹಾಲಪ್ಪ ಬಾಲದಂಡಿ ಇದ್ದರು.