ಹುಣಸೂರು: ಬೆಂಗಳೂರಿನ ದೇವ್-ಇನ್ ನ್ಯಾಶನಲ್ ಸ್ಕೂಲ್ನಲ್ಲಿ ಜ.19ರಂದು ಆಯೋಜಿಸಿದ್ದ ರಾಜ್ಯಮಟ್ಟದ ಬ್ರೇನ್-ಓ-ಥಾನ್(ಸಾಮಾನ್ಯ ಜ್ಞಾನ) ಪರೀಕ್ಷೆಯಲ್ಲಿ ಪಟ್ಟಣದ ಶಾಸ್ತ್ರೀ ಪಬ್ಲಿಕ್ ಸ್ಕೂಲ್ನ 10ನೇ ತರಗತಿ ವಿದ್ಯಾರ್ಥಿ ಪ್ರದ್ಯುಮ್ನ ಭಟ್ ದ್ವಿತೀಯ ಸ್ಥಾನ ಗಳಿಸಿದ್ದಾರೆ.
ಸಿಬಿಎಸ್ಸಿ ವಿಭಾಗದ ರಾಜ್ಯದ 150ಕ್ಕೂ ಹೆಚ್ಚು ವಿದ್ಯಾಸಂಸ್ಥೆಯ 800ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಪರೀಕ್ಷೆಯಲ್ಲಿ ಭಾಗವಹಿಸಿದ್ದು, ಗ್ರಾಮೀಣ ಪ್ರತಿಭೆಯಾಗಿ ನಮ್ಮ ವಿದ್ಯಾಸಂಸ್ಥೆಯ ಪ್ರದ್ಯುಮ್ನ ಭಟ್ ಸಾಧನೆಗೈದಿದ್ದಾರೆ ಎಂದು ವಿದ್ಯಾಸಂಸ್ಥೆಯ ಕಾರ್ಯದರ್ಶಿ ರಾಧಾಕೃಷ್ಣ ಹರ್ಷ ವ್ಯಕ್ತಪಡಿಸಿದ್ದಾರೆ.
ಪ್ರಾಂಶುಪಾಲ ರವಿಶಂಕರ್, ನಿರ್ದೇಶಕ ಸಚ್ಚಿತ್, ಶೈಕ್ಷಣಿಕ ಸಂಯೋಜಕಿ ಸತ್ಯವತಿ ವಿದ್ಯಾರ್ಥಿಯ ಸಾಧನೆಗೆ ಅಭಿನಂದಿಸಿದ್ದಾರೆ.