More

    ಪ್ರಧಾನಿ ಮೋದಿಯಿಂದ ಜನೋಪಯೋಗಿ ಕಾರ್ಯ

    ಬೆಳಗಾವಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಏಳು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧೆಡೆ ಬಿಜೆಪಿ ವತಿಯಿಂದ ಭಾನುವಾರ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಕೋವಿಡ್‌ನಿಂದ ಸಂಕಷ್ಟದಲ್ಲಿರುವ ಬಡ ಕುಟುಂಬದವರಿಗೆ ಬೆಳಗಾವಿ ಸಂಸದೆ ಮಂಗಲ ಅಂಗಡಿ ವಿವಿಧ ಕಿಟ್ ವಿತರಿಸಿದರು.

    ಬಿಜೆಪಿ ಬೆಳಗಾವಿ ಗ್ರಾಮೀಣ ಘಟಕದ ವತಿಯಿಂದ ಹಿರೇಬಾಗೇವಾಡಿ, ಬೆಂಡಿಗೇರಿ, ಬಸಾಪುರ, ಅರಳೀಕಟ್ಟಿ ಮುಂತಾದ ಗ್ರಾಮಗಳಿಗೆ ತೆರಳಿ ಕಿಟ್ ವಿತರಿಸಿದರು. ಈ ವೇಳೆ ಅವರು ಮಾತನಾಡಿ, ಕೇಂದ್ರದಲ್ಲಿ 2014ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಹತ್ತು ಹಲವು ಜನೋಪಯೋಗಿ ಕಾರ್ಯ ಹಮ್ಮಿಕೊಂಡಿದೆ. ಈ ಮೂಲಕ ಭಾರತ ವಿಶ್ವದ ಗಮನ ಸೆಳೆದಿದೆ. ಕಳೆದ 7 ವರ್ಷಗಳ ಅವಧಿಯಲ್ಲಿ ದೇಶ ಐತಿಹಾಸಿಕ ಸಾಧನೆ ಮಾಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಜಗತ್ತಿನೆಲ್ಲೆಡೆ ಕರೊನಾ ಅಟ್ಟಹಾಸ ಮೆರೆಯುತ್ತಿದ್ದು, ಮುಂದುವರಿದ ದೇಶಗಳೂ ಸಹ ಕರೊನಾ ವಿರುದ್ಧ ಸೆಣಸಾಟ ನಡೆಸುತ್ತಿವೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕೋವಿಡ್ ಸೋಂಕಿತರಿಗೆ ಸರ್ವವಿಧದಲ್ಲೂ ಸೌಲಭ್ಯ ಒದಗಿಸಲು ಪ್ರಯತ್ನಿಸುತ್ತಿದೆ. ಬಡವರು, ದೀನ-ದಲಿತರಿಗೆ ನೆರವಾಗುವ ನಿಟ್ಟಿನಲ್ಲಿ ಕಾರ್ಯಕರ್ತರು ಆಹಾರ ಕಿಟ್ ವಿತರಿಸುತ್ತಿದ್ದಾರೆ ಎಂದರು.

    ಬಿಜೆಪಿ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ, ಎಪಿಎಂಸಿ ಸದಸ್ಯ ಪಡಿಗೌಡ ಪಾಟೀಲ, ಬಿಜೆಪಿ ಸ್ಥಳೀಯ ನಾಯಕಿ ಗಿರಿಜಾ ಮಠಪತಿ, ಅರಳೀಕಟ್ಟಿ ಗ್ರಾಪಂ ಸದಸ್ಯೆ ಶೋಭಾ ಹುಲಮನಿ, ಬಿಜೆಪಿ ಕಾರ್ಯಕರ್ತರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts