ರೋಣ: ಪಟ್ಟಣದ ಶಿವಾನಂದಮಠದ ಬಸವರಾಜೇಂದ್ರ ಸ್ವಾಮೀಜಿ ಅವರ 69ನೇ ಪುಣ್ಯಸ್ಮರಣೋತ್ಸ ನಿಮಿತ್ತ ಅಪಾರ ಭಕ್ತರ ಜಯಘೊಷದೊಂದಿಗೆ ಗುರುವಾರ ಅದ್ದೂರಿಯಾಗಿ ರಥೋತ್ಸವ ಜರುಗಿತು.
ಬೆಳಗ್ಗೆ ವಿಶೇಷ ಪೂಜಾ ಕೈಂಕರ್ಯ ನೆರವೇರಿಸಲಾಯಿತು. ಭಕ್ತರು ಸರದಿಯಲ್ಲಿ ನಿಂತು ಶ್ರೀಗಳ ದರ್ಶನ ಪಡೆದರು. ದೇವಾಲಯದ ಅರ್ಚಕರು ಬಸವರಾಜೇಂದ್ರ ಸ್ವಾಮೀಜಿ ಅವರ ಮೂರ್ತಿಯನ್ನು ರಥೋತ್ಸವದಲ್ಲಿ ಪ್ರತಿಷ್ಠಾಪನೆ ಮಾಡುತ್ತಿದ್ದಂತೆ ಭಕ್ತರು ಜಯಘೊಷಣೆ ಕೂಗುತ್ತ ಉತ್ತತ್ತಿ ಎಸೆದು ಭಕ್ತಿ ಮೆರೆದರು.
*