More

    ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸಾವು

    ಕೆ.ಆರ್.ನಗರ: ಪಟ್ಟಣದ ಮೈಸೂರು ರಸ್ತೆಯ ಬಸವೇಶ್ವರ ಬಡಾವಣೆಯ ತಿರುವಿನಲ್ಲಿ ಮಂಗಳವಾರ ರಾತ್ರಿ ಸಾರಿಗೆ ಸಂಸ್ಥೆ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

    ಹುಣಸೂರು ತಾಲೂಕಿನ ರಾಮೇನಹಳ್ಳಿ ಗ್ರಾಮದ ಕುಮಾರ್ ಎಂಬುವರ ಪುತ್ರ ಪುನೀತ್(21) ಮೃತ ಬೈಕ್ ಸವಾರ. ಪಟ್ಟಣದ ಬಜಾರ್ ರಸ್ತೆಯ ಒಂದನೇ ತಿರುವಿನಲ್ಲಿ ಹೂವಿನ ವ್ಯಾಪಾರ ಮಾಡಿಕೊಂಡಿದ್ದ ಪುನೀತ್ ಎಂದಿನಂತೆ ಮಂಗಳವಾರ ರಾತ್ರಿ ವ್ಯಾಪಾರ ಮುಗಿಸಿಕೊಂಡು ಸ್ವಗ್ರಾಮ ರಾಮೇನಹಳ್ಳಿಗೆ ತೆರಳುತ್ತಿದ್ದಾಗ ಸಾರಿಗೆ ಸಂಸ್ಥೆ ಬಸ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟಿದ್ದಾನೆ.
    ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಶವಾಗಾರದಲ್ಲಿ ಬುಧವಾರ ಶವ ಪರೀಕ್ಷೆ ಮಾಡಿ ಮೃತ ದೇಹವನ್ನು ಕುಟುಂಬದ ಸದಸ್ಯರಿಗೆ ಹಸ್ತಾಂತರಿಸಲಾಯಿತು. ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts