More

    ಬಸ್-ಬೈಕ್ ಮುಖಾಮುಖಿ ಡಿಕ್ಕಿ ಇಬ್ಬರು ಸಾವು


    ಯಾದಗಿರಿ: ಸಾರಿಗೆ ಸಂಸ್ಥೆ ಬಸ್ ಮತ್ತು ಬೈಕ್ ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ತಂದೆ, ಮಗ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯವಾದ ಘಟನೆ ವಡಗೇರಾ ತಾಲೂಕಿನ ಶಿವಪುರ ಗ್ರಾಮದ ಹೊರ ವಲಯದಲ್ಲಿ ಗುರುವಾರ ನಡೆದಿದೆ.

    ಸಾಬಣ್ಣ ಶಿವಪುರ ( 38), ಮನೋಜ್ (07) ಮೃತ ದುದರ್ೈವಿಗಳು. ಜಮೀನು ಕೆಲಸ ಮುಗಿಸಿ ಸಾಬಣ್ಣ ತನ್ನ ನಾಲ್ಕು ಜನ ಮಕ್ಕಳೊಂದಿಗೆ ಬೈಕ್ ಮೇಲೆ ಮನೆಗೆ ತೆರಳುತ್ತಿದ್ದ. ಈ ವೇಳೆ ಶಿವಪುರದಿಂದ ಯಾದಗಿರಿ ಮಾರ್ಗವಾಗಿ ಬಸ್ ತೆರಳುತ್ತಿತ್ತು. ಎದುರಿಗೆ ಜಾಲಿ ಗಿಡ ದಟ್ಟವಾಗಿ ಬೆಳೆದ ಕಾರಣ ಬಸ್ ಬರುತ್ತಿರುವುದು ಸರಿಯಾಗಿ ಕಾಣಿಸಿಲ್ಲ. ಹೀಗಾಗಿ ದುರ್ಘಟನೆ ನಡೆದಿದೆ ಎನ್ನಲಾಗಿದೆ.

    ಘಟನೆಯಲ್ಲಿ ಗಂಭೀರ ಗಾಯಗೊಂಡ ರಂಜಿತಾ (10), ಚೈತ್ರಾ (08)ಳನ್ನು ಹೆಚ್ಚಿನ ಚಿಕಿತ್ಸೆಗೆ ರಾಯಚೂರಿಗೆ ಕಳಿಸಲಾಗಿದೆ. ಸ್ಥಳಕ್ಕೆ ವಡಗೇರಾ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮನೆಗೆ ಆಧಾರಸ್ತಂಭವಾಗಿದ್ದ ಯಜಮಾನನನ್ನು ಕಳೆದುಕೊಂಡ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ. ಜತೆಗೆ ಪತಿ ಹಾಗೂ ಹೆತ್ತ ಮಗನನ್ನು ಕಳೆದುಕೊಂಡ ಸಾಬಣ್ಣನ ಪತ್ನಿಯ ರೋಧನ ಎಂಥ ಕಲ್ಲೆದೆಯನ್ನೂ ಕರಗಿಸುವಂತೆ ಮಾಡಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಉಳಿದಿಬ್ಬರು ಮಕ್ಕಳ ಆರೋಗ್ಯ ಶೀಘ್ರ ಸುಧಾರಿಸಲಿ ಎಂದು ಗ್ರಾಮಸ್ಥರು ಭಗವಂತನಲ್ಲಿ ಪ್ರಾಥರ್ಿಸುತ್ತಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts