More

    ಬಸ್ ಸೇವೆ ಒದಗಿಸಲು ವಿದ್ಯಾರ್ಥಿನಿಯರಿಂದ ಪ್ರತಿಭಟನೆ


    ರಾಣೆಬೆನ್ನೂರ: ತಾಲೂಕಿನ ಗ್ರಾಮೀಣ ಭಾಗದಲ್ಲಿ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ನಗರದ ವಿವಿಧ ಕಾಲೇಜ್‌ಗಳ ವಿದ್ಯಾರ್ಥಿನಿಯರು ಇಲ್ಲಿಯ ಬಸ್ ನಿಲ್ದಾಣದ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
    ತಾಲೂಕಿನ ಗ್ರಾಮೀಣ ಭಾಗದಲ್ಲಿ ಬಸ್‌ಗಳು ಸರಿಯಾದ ಸಮಯಕ್ಕೆ ಬರುತ್ತಿಲ್ಲ. ಇದರಿಂದ ಶಾಲಾ-ಕಾಲೇಜ್‌ಗಳಿಗೆ ಸರಿಯಾದ ಸಮಯಕ್ಕೆ ತೆರಳಲು ಆಗುತ್ತಿಲ್ಲ. ಆದ್ದರಿಂದ ಸಾರಿಗೆ ಘಟಕದ ವ್ಯವಸ್ಥಾಪಕರು ಸೂಕ್ತ ಕ್ರಮ ಕೈಗೊಂಡು ಶಾಲಾ-ಕಾಲೇಜ್ ಆರಂಭವಾಗುವ ಸಮಯಕ್ಕೆ ಸರಿಯಾಗಿ ಗ್ರಾಮೀಣ ಭಾಗದಿಂದ ನಗರಕ್ಕೆ ಬಸ್‌ಗಳು ಬರುವಂತೆ ವ್ಯವಸ್ಥೆ ಮಾಡಬೇಕು. ಇಲ್ಲವಾದರೆ ಮುಂದಿನ ದಿನದಲ್ಲಿ ತೀವ್ರತರನಾದ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು. ಸ್ಥಳಕ್ಕೆ ಬಂದ ಸಾರಿಗೆ ಘಟಕದ ವ್ಯವಸ್ಥಾಪಕ ಶ್ರೀನಿವಾಸ ಮೂರ್ತಿ ಅವರಿಗೆ ಮನವಿ ಸಲ್ಲಿಸಿದರು.
    ಪ್ರಮುಖರಾದ ನಾಗರಾಜ ಮುದ್ದಪ್ಪಳವರ, ಪವನ ತೋಟದ, ಕಾವ್ಯಾ, ಮಂಜುಳಾ, ರಶ್ಮಿಕಾ, ದೀಪಿಕಾ ಹಾಗೂ ವಿವಿಧ ಕಾಲೇಜ್‌ಗಳ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts