More

    ಬಾಗಲಕೋಟೆ ಮತಕ್ಷೇತ್ರಕ್ಕೆ ಪ್ರಭಲ ಆಕಾಂಕ್ಷಿ

    ಬಾಗಲಕೋಟೆ: ಹೋರಾಟ, ಪ್ರಮಾಣಿಕ ದುಡಿಮೆ ಮೂಲಕ ಕಳೆದ ೧೦ ವರ್ಷಗಳಿಂದ ಬಿಜೆಪಿ ಪಕ್ಷದಲ್ಲಿ ಇದ್ದೇನೆ. ವಿವಿಧ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಶ್ರಮಿಸಿದ್ದೇನೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಾಗಲಕೋಟೆ ಮತಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ ಎಂದು ಬಿಜೆಪಿ ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ವೀರಣ್ಣ ಹಳೇಗೌಡರ ಹೇಳಿದರು.

    ನಗರದ ಪ್ರೆಸ್‌ಕ್ಲಬ್‌ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಬಿಜೆಪಿ ಹಿರಿಯ ನಾಯಕರಾದ ಬಿ.ಎಸ್.ಯಡಿಯೂರಪ್ಪ, ರಾಜ್ಯಾಧ್ಯಕ್ಷ ಬಿ.ವೈ.ವಿಜೇಂದ್ರ, ಜಿಲ್ಲೆಯ ಶಾಸಕರು, ಮಾಜಿ ಶಾಸಕರು, ಪಕ್ಷದ ಪ್ರಮುಖರನ್ನು ಭೇಟಿ ಮಾಡಿ ನನ್ನ ಬೆಂಬಲಿಸಲು ಮನವಿ ಮಾಡಿದ್ದೇನೆ. ಹಿಂದುಳಿದ ವರ್ಗದಿಂದ ಬಂದಿರುವ ನನಗೆ ಅವಕಾಶ ನೀಡಿದಲ್ಲಿ ಅತೀ ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಽಸುತ್ತೇನೆ ಎನ್ನುವ ವಿಶ್ವಾಸ ಇದೆ ಎಂದರು.

    ಈಗಾಗಲೇ ಬಾಗಲಕೋಟೆ ಕ್ಷೇತ್ರವನ್ನು ಪ್ರತಿನಿಽಸುತ್ತಿರುವ ಪಿ.ಸಿ.ಗದ್ದಿಗೌಡರ ಅವರನ್ನು ವಿರೋಧ ಮಾಡಿ ಟಿಕೆಟ್ ಕೇಳುತ್ತಿಲ್ಲ. ಅವರು ಸೇರಿದಂತೆ ಯಾರಿಗೂ ಟಿಕೆಟ್ ನೀಡಿದರು ಪಕ್ಷದ ಅಭ್ಯರ್ಥಿಗಳ ಪರವಾಗಿ ಚುನಾವಣೆ ಮಾಡುತ್ತೇನೆ. ಸಂಸದ ಪಿ.ಸಿ.ಗದ್ದಿಗೌಡರ ಅವರಿಗೆ ಟಿಕೆಟ್ ನಿರಾಕರಣೆ ಮಾಡಿದಲ್ಲಿ ನನಗೆ ಅವಕಾಶ ನೀಡಬೇಕು. ಈಗಾಗಲೇ ಪಕ್ಷದ ಹಿರಿಯರನ್ನು ಭೇಟಿ ಮಾಡಿದಾಗ ಉತ್ತಮ ಸ್ಪಂದನೆ ಸಿಕ್ಕಿದೆ ಎಂದರು.

    ಕಳೆದ ಹಲವು ವರ್ಷಗಳಿಂದ ಪಕ್ಷದಲ್ಲಿದ್ದು, ಸಾಕಷ್ಟು ಕೆಲಸಗಳನ್ನು ಮಾಡಿದ್ದೇನೆ. ಜಿಲ್ಲೆಯಲ್ಲಿ ಪಕ್ಷದ ಸಂಘಟನೆ ಮಾಡುತ್ತಾ ಹಿಂದುಳಿದ ವರ್ಗಗಳ ಏಳಿಗಾಗಿ ಶ್ರಮಿಸಿದ್ದೇನೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆದಿದ್ದೇನೆ. ಪಕ್ಷವು ನನ್ನನ್ನು ಗುರುತಿಸಿ ಟಿಕೆಟ್ ನೀಡಿದರೆ ಪಕ್ಷಕ್ಕೆ ಒಳ್ಳೆಯದ್ದು ಆಗುತ್ತದೆ. ಜಿಲ್ಲೆಯಲ್ಲಿ ಕುರುಬ ಸಮಾಜ ೪ ಲಕ್ಷ ಜನ ಸಂಖ್ಯೆ ಮತದಾರರನ್ನು ಹೊಂದಿದೆ. ಎಲ್ಲ ಜಾತಿ, ಜನಾಂಗದವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದು, ನನಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.

    ರವಾಡ, ಬೆಳಗಾವಿ, ಹಾವೇರಿ, ಗದಗ, ಬಾಗಲಕೋಟೆಗಳಲ್ಲಿ ಕುರುಬ ಸಮುದಾಯದವರಿಗೆ ಇಲ್ಲಿವರೆಗೂ ಟಿಕೆಟ್ ನೀಡಿಲ್ಲ. ಈಗ ಬಾಗಲಕೋಟೆ ಮತಕ್ಷೇತ್ರದಿಂದ ನನಗೆ ಟಿಕೆಟ್ ನೀಡಬೇಕು ಎಂದು ಮನವಿ ಮಾಡಿಕೊಳ್ಳುತ್ತೇನೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ದೇಶ ಕಂಡ ಅತ್ಯುತ್ತಮ ಪ್ರಧಾನಿ. ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡುವ ಕನಸು ನಮ್ಮೆಲ್ಲರ ಉದ್ದೇಶವಾಗಿದೆ ಎಂದು ಹೇಳಿದರು.

    ಬಿಜೆಪಿ ಜಿಲ್ಲಾ ಕಾರ್ಯಕಾರಣಿ ಸದಸ್ಯ ಸಂಗಮೇಶ ಹೂಗಾರ, ಶೇಖಪ್ಪ ಚವ್ಹಾಣ್, ಸುಭಾಷ ರಾಮೋಡಗಿ, ಕೋನಪ್ಪ ಆಡಗಲ್, ಚಂದ್ರಶೇಖರ ಕಲ್ಲಹೊಲದ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts