ಬೆಳಗಾವಿ: ಭ್ರಷ್ಟಾಚಾರ, ನಿಷ್ಕ್ರಿಯತೆ ಸೇರಿ ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿರುವ ರಾಜ್ಯ ಯುವ ಕಾಂಗ್ರೆಸ್ ವತಿಯಿಂದ ಸೋಮವಾರ ಅಧ್ಯ ಮಹಮ್ಮದ್ ನಲಪಾಡ್ ನೇತೃತ್ವದಲ್ಲಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿ, ಸುವರ್ಣವಿಧಾನ ಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ನಗರದ ಬಿ.ಎಸ್.ಯಡಿಯೂರಪ್ಪ ಮಾರ್ಗದಿಂದ ಅಲಾರವಾಡ ಕ್ರಾಸ್ವರೆಗೂ ಸಾವಿರಾರು ಕಾರ್ಯಕರ್ತರು ಮೆರವಣಿಗೆ ನಡೆಸಿ ಸರ್ಕಾರದ ವಿರುದ್ಧ ೂಷಣೆ ಕೂಗಿ, ಆಕ್ರೋಶ ಹೊರಹಾಕಿದರು. ಪ್ರತಿಭಟನಾ ಮೆರವಣಿಗೆ ಅಲಾರವಾಡ ಕ್ರಾಸ್ ತಲುಪುತ್ತಿದ್ದಂತೆ ಡಿಸಿಪಿ ರವೀಂದ್ರ ಗಡಾದಿ ನೇತೃತ್ವದ ಪೊಲೀಸ್ ತಂಡ ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದರು.
ನಲಪಾಡ್ ಮಾತನಾಡಿ, ಬಿಜೆಪಿ ಮೊದಲು ನಮ್ಮ ಉದ್ಯೋಗ ಕಸಿದುಕೊಂಡಿದೆ. ಈಗ ಚಿಲುಮೆ ಎಂಬ ಸಂಸ್ಥೆ ಮೂಲಕ ನಮ್ಮ ವೋಟ್ ಕಳ್ಳತನ ಮಾಡಿದೆ. 40 ಪರ್ಸೆಂಟೇಜ್ ವಿರುದ್ಧ ಧ್ವನಿ ಎತ್ತಿದ ಗುತ್ತಿಗೆದಾರ ಸಂದ ಅಧ್ಯರನ್ನು ಬಂಧಿಸಲಾಗಿದೆ. ಈ ಸರ್ಕಾರ ಪ್ರತಿ ಹಂತದಲ್ಲೂ ಹಗರಣ ಮಾಡುತ್ತಿದ್ದು, ಸರ್ಕಾರದ ವಿರುದ್ಧ ಮಾತನಾಡಲು ಜನ ಭಯ ಪಡುವಂತಾಗಿದೆ. ಈ 40% ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸುವವರೆಗೆ ಯುವ ಕಾಂಗ್ರೆಸ್ ಸುಮ್ಮನಿರುವುದಿಲ್ಲ ಎಂದು ಗುಡುಗಿದರು. ರಾಹುಲ್ ಜಾರಕಿಹೊಳಿ ಮಾತನಾಡಿ, ಉತ್ತರ ಕರ್ನಾಟಕ ಆಶೋತ್ತರಗಳಿಗೆ ಧ್ವನಿಯಾಗಬೇಕೆಂಬ ಉದ್ದೇಶದಿಂದ ಸುರ್ವಣಸೌಧ ನಿರ್ಮಿಸಲಾಗಿದೆ. ಆದರೆ, ಬಿಜೆಪಿ ಸರ್ಕಾರದ ರ್ನಿಲ್ಯದಿಂದ ಯಾವುದೇ ಅಭಿವೃದ್ಧಿ ಕಾರ್ಯಗಳು ನೆರವೇರುತ್ತಿಲ್ಲ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿನ ಅನೇಕ ಅಭಿವೃದ್ಧಿ ಯೋಜನೆಗಳನ್ನು ಬಿಜೆಪಿಯವರು ಉದ್ಘಾಟನೆ ಮಾಡಲು ಹೊರಟಿದ್ದಾರೆ. ಸರ್ಕಾರದ ನಡೆಗೆ ಜನರು ಬೇಸತ್ತಿದ್ದಾರೆ. ಸರ್ಕಾರಕ್ಕೆ ಮುಂದಿನ ದಿನಗಳಲ್ಲಿ ಯುವ ಜನತೆ ಪಾಠ ಕಲಿಸಲಿದ್ದಾರೆ ಎಂದರು. ಶಾಸಕಿ ಲಕ್ಷಿ$್ಮ ಹೆಬ್ಬಾಳ್ಕರ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಯುವ ಕಾಂಗ್ರೆಸ್ ಜಿಲ್ಲಾಧ್ಯ ಕಾರ್ತಿಕ ಪಾಟೀಲ, ಮೃಣಾಲ ಹೆಬ್ಬಾಳ್ಕರ್, ಸೀತಲ ಮಠಪತಿ, ಯುವ ಕಾಂಗ್ರೆಸ್ ಪದಾಧಿಕಾರಿಗಳು, ಕಾರ್ಯಕರ್ತರು ಇದ್ದರು.