More

    ಬಿಜೆಪಿಯಿಂದ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ

    ಚನ್ನರಾಯಪಟ್ಟಣ: ರಾಜ್ಯ ಮತ್ತು ಕೇಂದ್ರದಲ್ಲಿ ಒಂದೇ ಪಕ್ಷ ಅಧಿಕಾರದಲ್ಲಿದ್ದರೆ ಮಾತ್ರ ಅಭಿವೃದ್ಧಿ ಸಾಧ್ಯವೆಂದು ಬಿಜೆಪಿಯ ಡಬಲ್ ಇಂಜಿನ್ ಈಗಾಗಲೇ ಸಾಬೀತು ಮಾಡಿದೆ. ಮತ್ತೊಮ್ಮೆ ರಾಜ್ಯದಲ್ಲಿ ಅಭಿವೃದ್ಧಿಯ ಪರ್ವಕ್ಕಾಗಿ ಶ್ರವಣಬೆಳಗೊಳ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸವಂತೆ ಉತ್ತರಪ್ರದೇಶದ ರಾಜ್ಯಸಭಾ ಸದಸ್ಯ ವಿಜಯ್‌ಪಾಲ್ ಥೋಮರ್ ಮನವಿ ಮಾಡಿದರು.

    ಕೇಂದ್ರದ ಯೋಜನೆಗಳು ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನವಾಗಬೇಕಾದರೆ ರಾಜ್ಯದಲ್ಲಿಯೂ ಬಿಜೆಪಿ ಸರ್ಕಾರದ ಅವಶ್ಯಕತೆ ಮುಖ್ಯ. ದೇಶ ಮತ್ತು ರಾಜ್ಯದ ಅಭಿವೃದ್ಧಿ ಬಿಜೆಪಿಯಿಂದ ಮಾತ್ರ ಸಾಧ್ಯ. ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್ ಮೂಲಮಂತ್ರದೊಂದಿಗೆ ಬಿಜೆಪಿ ಸಾಗಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

    ಕೇಂದ್ರ ಸರ್ಕಾರವು 3 ಕೋಟಿ ಮನೆಗಳ ನಿರ್ಮಾಣಕ್ಕಾಗಿ ಹಣ ನೀಡಿದ್ದು, ಇದರಲ್ಲಿ ರಾಜ್ಯದ ಪಾಲು ಇದ್ದು, 9 ಕೋಟಿ ಶೌಚಗೃಹ ನಿರ್ಮಾಣ, 11 ಕೋಟಿ ಉಜ್ವಲ ಗ್ಯಾಸ್ ಯೋಜನೆ, 5 ಲಕ್ಷದ ಆರೋಗ್ಯ ವಿಮೆಯ ಆಯುಷ್ಮಾನ್ ಭಾರತ್ ಯೋಜನೆ, ಪಿಎಂ ಕಿಸಾನ್ ಯೋಜನೆಯಡಿ 2.5 ಲಕ್ಷ ಕೋಟಿ ರೈತರಿಗೆ ನೀಡುವ ಮೂಲಕ ರಾಜ್ಯ ಮತ್ತು ಕೇಂದ್ರ ಸರ್ಕಾರ ಜನಪರವಾಗಿ ನಿಂತಿದೆ. ಕೇಂದ್ರ ಮತ್ತು ರಾಜ್ಯದ ಯೋಜನೆಗಳು ಸಿಗಬೇಕಾದರೆ ಸ್ಥಳೀಯ ಮಟ್ಟದಲ್ಲೂ ಬಿಜೆಪಿ ಇರಬೇಕು. ಆದ್ದರಿಂದ ಇಲ್ಲಿನ ಬಿಜೆಪಿ ಅಭ್ಯರ್ಥಿ ಸಿ.ಆರ್. ಚಿದಾನಂದ್ ಅವರನ್ನು ಗೆಲ್ಲಿಸುವಂತೆ ಮನವಿ ಮಾಡಿದರು.

    ಬಿಜೆಪಿ ಅಭ್ಯರ್ಥಿ ಸಿ.ಆರ್. ಚಿದಾನಂದ್ ಮಾತನಾಡಿ, ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ಬಾಕಿಯಿದ್ದು, ಅವುಗಳ ಈಡೇರಿಕೆಗಾಗಿ ಬಿಜೆಪಿಗೆ ಆಶೀರ್ವದಿಸುವಂತೆ ಕೋರಿದರು. ಹಿರಿಯರು, ವರಿಷ್ಠರು ನನ್ನ ಮೇಲೆ ವಿಶ್ವಾಸವಿಟ್ಟು ಟಿಕೆಟ್ ನೀಡಿದ್ದು, ಅದನ್ನು ಉಳಿಸಿಕೊಳ್ಳವು ನಿಟ್ಟಿನಲ್ಲಿ ಕಾರ್ಯನ್ಮೋಖವಾಗಿದ್ದು, ಇಲ್ಲಿನ ಜನರಿಗೆ ಗೌರವ ತರುವ ರೀತಿಯಲ್ಲಿ ನಡೆದುಕೊಳ್ಳವುದಾಗಿ ತಿಳಿಸಿದರು.

    ಸುದ್ದಿಗೋಷ್ಠಿಯಲ್ಲಿ ದೆಹಲಿ ಮಹಾನಗರ ಪಾಲಿಕೆ ಮಾಜಿ ಮೇಯರ್ ಯೋಗೇಂದ್ರ ಛಾಂಡೋಲಿಯಾ, ಕ್ಷೇತ್ರದ ಚುನಾವಣಾ ಉಸ್ತುವಾರಿ ಮಂಜುನಾಥ್ ಮಂಡ್ಯ, ತಾಲೂಕು ಅಧ್ಯಕ್ಷ ಡಿ.ಎಂ. ರವಿ, ಮುಖಂಡರಾದ ಆಣತಿ ಆನಂದ್‌ಕುಮಾರ್, ನಂಜುಂಡ ಮೈಮ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts