More

    ಬಿಜೆಪಿಯಿಂದ ರಾಜಕೀಯಕ್ಕೆ ದೇವರ ಬಳಕೆ

    ಕೋಲಾರ: ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆಯನ್ನು ಬಿಜೆಪಿ ಕಾರ್ಯಕ್ರಮ ಎನ್ನುವ ರೀತಿ ಬಿಂಬಿಸಲಾಗಿದೆ. ದೇವರನ್ನು ರಾಜಕಾರಣಕ್ಕೆ ಉಪಯೋಗಿಸಿಕೊಳ್ಳುವುದು ಪ್ರಜಾಪ್ರಭುತ್ವದಲ್ಲಿ ಸರಿಯಲ್ಲ ಎಂದು ಕಾಂಗ್ರೆಸ್​ ಜಿಲ್ಲಾಧ್ಯಕ್ಷ ಲಕ್ಷಿ$್ಮನಾರಾಯಣ ಹೇಳಿದರು.

    ಕಾಂಗ್ರೆಸ್​ ಮುಖಂಡರು ವಾಸ್ತವದ ನೆಲೆಗಟ್ಟಿನಲ್ಲಿ ಮಾತನಾಡುತ್ತಾರೆ, ಅಯೋಧ್ಯೆಯಲ್ಲಿ ನಡೆದ ಕಾರ್ಯಕ್ರಮ ಒಂದು ಪಕ್ಷದ ಕಾರ್ಯಕ್ರಮ ಎಂದು ಕಾಂಗ್ರೆಸ್​ಗೆ ಅನಿಸಿದೆ. ನಾವ್ಯಾರೂ ರಾಮನನ್ನು ವಿರೋಧಿಸುತ್ತಿಲ್ಲ ಎಂದು ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಸ್ಪಷ್ಟಪಡಿಸಿದರು.
    5 ರಾಜ್ಯಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ ಶೇಕಡವಾರು ಮತ ಗಳಿಕೆಯಲ್ಲಿ ಉತ್ತಮವಾಗಿದೆ. ದಣ ಭಾರತದಲ್ಲಿ ಕಾಂಗ್ರೆಸ್​ ಬಲಿಷ್ಠವಾಗಿದೆ. ಗ್ಯಾರಂಟಿ ಯೋಜನೆಗಳಿಂದ ಜನತೆ ಸ್ವಾವಲಂಬಿ ಜೀವನ ರೂಪಿಸಿಕೊಳ್ಳಲು ಸಹಕಾರಿಯಾಗುತ್ತಿದೆ. ಕೇಂದ್ರದಲ್ಲಿ ಕಾಂಗ್ರೆಸ್​ ಅಧಿಕಾರಕ್ಕೆ ತರುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts