ಹುಬ್ಬಳ್ಳಿ; ಬಿಜೆಪಿ ಸರ್ಕಾರದಲ್ಲಿ ಅವರ ಪಕ್ಷದ ಕಾರ್ಯಕರ್ತರಿಗೆ ರಕ್ಷಣೆ ಇಲ್ಲದಂತಾಗಿದೆ. ಇನ್ನೂ ಜನಸಾಮಾನ್ಯರ ಗತಿ ಏನೋ ಎಂದು ಮಾಜಿ ಸಚಿವ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಟೀಕಿಸಿದರು. ಹುಬ್ಬಳ್ಳಿಯಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. ಬಿಜೆಪಿ ಮುಖಂಡ ಪ್ತವೀಣ ಹತ್ಯೆಗೆ ಸಂಬಂಧಿಸಿದಂತೆ ಆ ಪಕ್ಷದವರು ಇದುವರೆಗೆ ಗಲಭೆ ಎಬ್ಬಿಸದಿರುವುದು ಅಚ್ಚರಿ ಮೂಡಿಸಿದೆ ಎಂದರು. ಹತ್ಯೆಗೆ ಸಂಬಂಧಿಸಿದಂತೆ ಮುಕ್ತ ತನಿಖೆಗೆ ಪೊಲೀಸರಿಗೆ ಅವಕಾಶ ನೀಡಬೇಕು ಎಂದರು.