More

    ಬಿಜೆಪಿ ಟಿಕೆಟ್ ಸ್ಥಳೀಯರಿಗೆ ನೀಡಿ

    ಚಿತ್ರದುರ್ಗ: ಇಲ್ಲಿನ ಲೋಕಸಭಾ ಕ್ಷೇತ್ರಕ್ಕೆ ಹೊರಗಿನವರಿಗೆ ಟಿಕೆಟ್ ನೀಡಿ, ಗೆಲ್ಲಿಸಿದ ನಂತರವೂ ನಿರೀಕ್ಷಿತ ಪ್ರಮಾಣದಲ್ಲಿ ಅಭಿವೃದ್ಧಿ ಸಾಧ್ಯವಾಗುತ್ತಿಲ್ಲ. ಆದ್ದರಿಂದ ಬಿಜೆಪಿಯ ವರಿಷ್ಠರು ಸ್ಥಳೀಯರಿಗೆ ಈ ಬಾರಿ ಟಿಕೆಟ್ ನೀಡಬೇಕು ಎಂದು ಹೊಳಲ್ಕೆರೆ ತಾಪಂ ಮಾಜಿ ಸದಸ್ಯ ದೇವರಾಜ್ ಒತ್ತಾಯಿಸಿದರು.

    ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹೊರಗಿನವರು ಜಿಲ್ಲೆಯ ಕುರಿತು ಕಾಳಜಿ ತೋರುವುದಿಲ್ಲ. ಇಲ್ಲಿನ ಸಮಸ್ಯೆ ತಿಳಿದವರಿಗೆ ಟಿಕೆಟ್ ನೀಡಿದಲ್ಲಿ ಜನರೊಟ್ಟಿಗೆ ಇದ್ದು, ಬಗೆಹರಿಸಲು ಪ್ರಯತ್ನಿಸುತ್ತಾರೆ. ಹೀಗಾಗಿ ಸೂಕ್ತರಿಗೆ ಟಿಕೆಟ್ ನೀಡಬೇಕು ಎಂದು ಮನವಿ ಮಾಡಿದರು.

    ಚಿತ್ರದುರ್ಗದ ಅಕ್ಕ-ಪಕ್ಕ ಜಿಲ್ಲೆಗಳಾದ ದಾವಣಗೆರೆ, ತುಮಕೂರು ಜಿಲ್ಲೆಗಳು ಸಾಕಷ್ಟು ಪ್ರಮಾಣದಲ್ಲಿ ಅಭಿವೃದ್ಧಿಯಾಗಿವೆ. ಇದಕ್ಕೆ ಸ್ಥಳೀಯರಿಗೆ ಅವಕಾಶ ಮಾಡಿಕೊಟ್ಟಿರುವುದೇ ಪ್ರಮುಖ ಕಾರಣ. ಬದ್ಧತೆಯಿಂದ ಕ್ಷೇತ್ರಕ್ಕಾಗಿ ಶ್ರಮಿಸುತ್ತಾರೆ. ಕಳೆದ ಎರಡ್ಮೂರು ದಶಕದಿಂದಲೂ ಜಿಲ್ಲೆ ಪ್ರಗತಿ ಕಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ಜಿಲ್ಲೆಯೂ ಪ್ರವಾಸೋದ್ಯಮಕ್ಕೆ ಹೇಳಿ ಮಾಡಿಸಿದ ಜಾಗವಾಗಿದೆ. ಆದರೆ, ಐತಿಹಾಸಿಕ ಸ್ಥಳಗಳಲ್ಲಿ ಅಗತ್ಯ ಮೂಲಸೌಕರ್ಯಗಳಿಲ್ಲ. ಕೈಗಾರಿಕಾ ಕಾರಿಡಾರ್ ಇಲ್ಲದೆ, ಯುವಸಮೂಹ ಉದ್ಯೋಗಕ್ಕಾಗಿ ಗುಳೆ ಹೋಗುವುದು ನಿಂತಿಲ್ಲ. ಮಾನವ ಸಂಪನ್ಮೂಲ ಅನ್ಯ ರಾಜ್ಯ, ಜಿಲ್ಲೆಗಳಿಗೆ ಹೋಗುವುದನ್ನು ತಡೆಯಬೇಕು. ಆದ್ದರಿಂದ ಅಭಿವೃದ್ಧಿ ಪರವಿರುವ ಸ್ಥಳೀಯರಿಗೆ ನೀಡಬೇಕು. ಇದರಿಂದ ಪಕ್ಷದ ಗೆಲುವಿಗೂ ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟರು.

    ಗ್ರಾಪಂ ಸದಸ್ಯ ಶೇಖರಪ್ಪ, ಬಿಜೆಪಿ ಮುಖಂಡರಾದ ತಿಮ್ಮೇಶ್, ಕೃಷ್ಣಮೂರ್ತಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts