More

    ಬಿಜೆಪಿ ಬಲವರ್ಧನೆಗೆ ಶ್ರಮಿಸಿ

    ಹಿರೇಕೆರೂರ: ಕಾರ್ಯಕರ್ತರು ಬೇರು ಮಟ್ಟದಿಂದ ಪಕ್ಷ ಸಂಘಟನೆಗೆ ಒತ್ತು ನೀಡುವ ಮೂಲಕ ಬಿಜೆಪಿಯನ್ನು ಮತ್ತಷ್ಟು ಬಲಪಡಿಸಬೇಕು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ಹೇಳಿದರು.

    ಪಟ್ಟಣದಲ್ಲಿ ಬಿಜೆಪಿ ತಾಲೂಕು ಘಟಕದಿಂದ ಸೋಮವಾರ ಏರ್ಪಡಿಸಿದ್ದ ಬಿಜೆಪಿ ಮಂಡಲ ಪ್ರಶಿಕ್ಷಣ ವರ್ಗ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

    ಬಿಜೆಪಿ ಶಿಸ್ತು ಮತ್ತು ಕಾರ್ಯಕ್ರಮಗಳಿಂದಾಗಿ ಬಹುದೊಡ್ಡ ಪಕ್ಷವಾಗಿ ಬೆಳೆದಿದೆ. ಕಾರ್ಯಕರ್ತರು ಬೂತ್ ಮಟ್ಟದಿಂದ ಪಕ್ಷದ ವಿಚಾರಧಾರೆಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಜನರಿಗೆ ಮನವರಿಕೆ ಮಾಡುವ ಮೂಲಕ ಬಿಜೆಪಿ ಬಲವರ್ಧನೆಗೆೆ ಶ್ರಮಿಸಬೇಕು ಎಂದು ಹೇಳಿದರು.

    ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ. ಬಣಕಾರ ಮಾತನಾಡಿ, ಪ್ರತಿಯೊಬ್ಬ ಕಾರ್ಯಕರ್ತರಿಗೂ ಬಿಜೆಪಿ ಪಕ್ಷದ ಇತಿಹಾಸ ತತ್ತ್ವ ಸಿದ್ಧಾಂತ, ವಿಚಾರಧಾರೆಗಳನ್ನು ಜನತೆಗೆ ತಿಳಿಸಬೇಕಾಗಿದೆ. ಪ್ರಶಿಕ್ಷಣದಲ್ಲಿ ಮಂಡಿಸುವ ವಿಷಯಗಳ ಚರ್ಚೆಯಲ್ಲಿ ಪಾಲ್ಗೊಂಡು ಜ್ಞಾನ ಪಡೆದುಕೊಳ್ಳಬೇಕು. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದು, ಕಾರ್ಯಕರ್ತರು ಸರ್ಕಾರಗಳು ಮತ್ತು ಜನತೆಯ ನಡುವೆ ಸಂಪರ್ಕ ಸೇತುವೆಯಾಗಿ ಕಾರ್ಯನಿರ್ವಹಿಸಿ ಸರ್ಕಾರಗಳ ಸಾಧನೆಗಳನ್ನು ಜನತೆಗೆ ತಿಳಿಸಬೇಕು ಎಂದರು. ಬಿಜೆಪಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಕಲ್ಯಾಣಕುಮಾರ ಶೆಟ್ಟರ್, ರಾಜ್ಯ ರೈತ ಮೋರ್ಚಾ ಕಾರ್ಯದರ್ಶಿ ಪಾಲಾಕ್ಷಗೌಡ ಪಾಟೀಲ, ಬಿಜೆಪಿ ತಾಲೂಕು ಘಟಕದ ಅಧ್ಯಕ್ಷ ಷಣ್ಮುಖಯ್ಯ ಮಳಿಮಠ, ಜಿಲ್ಲಾ ಬಿಜೆಪಿ ಘಟಕದ ಉಪಾಧ್ಯಕ್ಷ ಡಿ.ಸಿ. ಪಾಟೀಲ, ಜಿಪಂ ಸದಸ್ಯರಾದ ಎನ್.ಎಂ. ಈಟೇರ, ಸುಮಿತ್ರಾ ಪಾಟೀಲ, ಪಪಂ ಅಧ್ಯಕ್ಷ ಗುರುಶಾಂತ ಯತ್ತಿನಹಳ್ಳಿ, ಕೃಷ್ಣಾ ಈಳಗೇರ, ದೇವರಾಜ ನಾಗಣ್ಣನವರ, ಶಂಕರಗೌಡ ಚನ್ನಗೌಡ್ರ ಸೇರಿದಂತೆ ಬಿಜೆಪಿ ವಿವಿಧ ಘಟಕ ಮತ್ತು ಮೋರ್ಚಾಗಳ ಪದಾಧಿಕಾರಿಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts