More

    ಬೂತ್ ಮಟ್ಟದಿಂದ ಶ್ರಮಿಸಿದಾಗ ಜೆಡಿಎಸ್ ಅಧಿಕಾರಕ್ಕೆ

    ಚಿಕ್ಕಮಗಳೂರು: ಕಾರ್ಯಕರ್ತರು ಬೂತ್ ಮಟ್ಟದಿಂದ ಸಂಘಟಿಸಿದಾಗ ಮಾತ್ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಸಾಧ್ಯ ಎಂದು ಮುಖಂಡ ಬಿ.ಎಂ.ತಿಮ್ಮಶೆಟ್ಟಿ ಹೇಳಿದರು.

    ಜೆಡಿಎಸ್ ಕಚೇರಿಯಲ್ಲಿ ಬುಧವಾರ ಆಯೋಜಿಸಿದ್ದ ತಾಲೂಕು ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಪಕ್ಷ ಬಲವರ್ಧನೆಗೆ ಶ್ರಮಿಸಲಾಗುತ್ತಿದೆ. ಜೆಡಿಎಸ್ ಅವಧಿಯಲ್ಲಿ ಮಾಡಿದ ಸಾಧನೆಗಳನ್ನು ಜನರಿಗೆ ಮುಟ್ಟಿಸಲು ಬೂತ್ ಮಟ್ಟದ ಸಮಾವೇಶಕ್ಕಾಗಿ ಎಲ್​ಇಡಿ ಪರದೆ ಅಳವಡಿಸಿದ ಪ್ರಚಾರ ವಾಹನಕ್ಕೆ ಸೆ.24 ರಂದು ಚಾಲನೆ ನೀಡಲಾಗುವುದು. ಪ್ರಚಾರ ವಾಹನ ಪ್ರತಿ ಹಳ್ಳಿಗಳಲ್ಲಿ ಸಂಚರಿಸಲಿದೆ. ಜತೆಗೆ ಸ್ಥಳೀಯ ಕಾರ್ಯಕರ್ತರು ಜೆಡಿಎಸ್ ಸಾಧನೆಗಳನ್ನು ಮತದಾರರಿಗೆ ಮುಟ್ಟಿಸುವ ಕೆಲಸ ಮಾಡಬೇಕು ಎಂದರು.

    ಜಿಲ್ಲೆಯಲ್ಲಿ ಎರಡು ದಶಕಗಳಿಂದ ಜೆಡಿಎಸ್ ಗೆಲುವು ಕನಸಾಗಿ ಉಳಿದಿದೆ. ಆ ಕನಸು ನನಸು ಮಾಡುವ ಕಾಲ ಸನಿಹಿವಾಗಿದ್ದು, ಎಚ್.ಡಿ.ಕುಮಾರಸ್ವಾಮಿ ಅವರ ಸಾಧನೆಗಳನ್ನು ಮನಮುಟ್ಟುವಂತೆ ತಿಳಿಸಿ ಜಿಲ್ಲೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳ ಗೆಲುವಿಗೆ ಮುಂದಾಗಬೇಕು ಎಂದು ಹೇಳಿದರು.

    ನಗರಾಧ್ಯಕ್ಷ ಎ.ಸಿ.ಕುಮಾರಗೌಡ ಮಾತನಾಡಿ, ಪಕ್ಷ ಸಂಘಟಿಸಲು ಕಾರ್ಯಕರ್ತರು ಶ್ರಮಿಸಿದಾಗ ಮಾತ್ರ ಜೆಡಿಎಸ್ ಅಧಿಕಾರಕ್ಕೆ ಬರಲು ಸಾಧ್ಯ. ಎಲ್ಲ ಭಿನ್ನಾಭಿಪ್ರಾಯ ಬದಿಗೊತ್ತಿ ಕಾರ್ಯಕರ್ತರು ಅಭ್ಯರ್ಥಿ ಪರ ಪ್ರಾಮಾಣಿಕ ಕೆಲಸ ಮಾಡಿ ಪಕ್ಷ ಸಂಘಟನೆಗೆ ಮುಂದಾಗಬೇಕು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts